ಓಮಾನ್ನಲ್ಲಿ ಭೀಕರ ರಸ್ತೆ ಅಪಘಾತದಲ್ಲಿ (Road Accident) ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದ ಒಂದೇ ಕುಟುಂಬದ ನಾಲ್ವರು ಸಜೀವ ದಹನವಾಗಿದ್ದಾರೆ. ಪ್ರವಾಸಕ್ಕೆ ಹೋಗಿದ್ದ ಕುಟುಂಬ ಹೈಮಾ ಪ್ರದೇಶದಲ್ಲಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಕಾರು ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ.

ಈ ವೇಳೆ ಒಮ್ಮೆಲೆ ಬೆಂಕಿ ಹೊತ್ತಿಕೊಂಡಿದ್ದು, ಕಾರಿನೊಳಗೆ ಸಿಲುಕಿದ ಕುಟುಂಬಸ್ಥರು ಸಜೀವ ದಹನವಾಗಿದ್ದಾರೆ. ಪವನಕುಮಾರ್ ತಹಶಿಲ್ದಾರ, ಪೂಜಾ, ವಿಜಯಾ, ಆದಿಶೇಷ ಮೃತ ದುರ್ದೈವಿಗಳು.
🛒 Recommended for You:

ಇಬ್ಬರು ಮಕ್ಕಳು, ತಾಯಿ ಹಾಗೂ ಅಳಿಯನ ಸಾವಾಗಿದೆ. ಮೃತರ ಶವವನ್ನು ಭಾರತಕ್ಕೆ ತರಲು ರಾಜ್ಯಸಭಾ ಈರಣ್ಣ ಕಡಾಡಿ ಮಾತುಕತೆ ನಡೆಸಿದ್ದಾರೆ. ವಿದೇಶಾಂಗ ಸಚಿವ ಎಸ್ ಜೈಶಂಕರ್ ಹಾಗೂ ಪ್ರಹ್ಲಾದ್ ಜೋಶಿಗೆ ಮನವಿ ಮಾಡಿದ್ದಾರೆ.




