ದ್ವಿಚಕ್ರ ವಾಹನ ಸವಾರನೋರ್ವನ ಮೇಲೆ ಕಾಡು ಹಂದಿಯೊಂದು ದಾಳಿ ಮಾಡಿದ ಪರಿಣಾಮ, ಯುಕನೋರ್ವ ಗಾಯಗೊಂಡ ಘಟನೆ ಇಂದು ಮುಂಜಾನೆ ಪುತ್ತೂರು ತಾಲೂಕು ಅರಿಯಡ್ಕ ಗ್ರಾಮದ ಕೌಡಿಚ್ಚಾರು ಸಮೀಪದ ಕುರುಂಜ ಮಣ್ಣಾಪು ಎಂಬಲ್ಲಿ ನಡೆದಿದೆ.
ಸ್ಥಳೀಯ ನಿವಾಸಿ ಧನುಷ್(30) ಗಾಯಗೊಂಡವರು.ಕುಂಬ್ರ ಪೆಟ್ರೋಲ್ ಬಂಕ್ ನಲ್ಲಿ ಮ್ಯಾನೇಜರ್ ಆಗಿರುವ ಧನುಷ್ ಎಂದಿನಂತೆ ಇಂದು ಬೆಳಗ್ಗೆ ಸ್ಕೂಟರ್ ನಲ್ಲಿ ಪೆಟ್ರೋಲ್ ಬಂಕ್ ಗೆ ಹೋಗುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಕುರುಂಜ ಮಣ್ಣಾಪು ತಲುಪಿದಾಗ ಏಕಾಏಕಿ ಕಾಡು ಹಂದಿಯೊಂದು ಧನುಷ್ ಚಲಾಯಿಸುತ್ತಿದ್ದ ಸ್ಕೂಟರ್ ಮೇಲೆ ಎರಗಿದೆ. ಈ ವೇಳೆ ಧನುಷ್ ನಿಯಂತ್ರಣ ತಪ್ಪಿ ಕೆಳಗೆ ಬಿದ್ದಿದ್ದಾನೆ. ಬಳಿಕ ಕಾಡುಹಂದಿ ಧನುಷ್ ಮೇಲೆ ಎರಗಿದ್ದು, ಅವರ ಬಲ ಕೈಗೆ ಕಚ್ಚಿ ಗಂಭೀರವಾಗಿ ಗಾಯಗೊಳಿಸಿದೆ. ಇದರೊಂದಿಗೆ ಆತನ ಇತರ ದೇಹದ ಭಾಗಗಳಿಗೆ ಗಾಯಗೊಳಿಸಿದೆ. ಗಾಯಾಳುವನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
-
ಟೀಮ್ ಇಂಡಿಯಾದ ಹೊಸ ‘ಜೆರ್ಸಿ’ ಪ್ರಾಯೋಜಕರಾಗಿ ‘ಅಪೊಲೊ ಟೈರ್ಸ್’ ಆಯ್ಕೆ
(AI ಚಿತ್ರ) ಭಾರತೀಯ ಕ್ರಿಕೆಟ್ ತಂಡದ ಹೊಸ ಜೆರ್ಸಿ ಪ್ರಾಯೋಜಕರಾಗಿ ಅಪೊಲೊ ಟೈರ್ಸ್’ನ್ನ ಅನಾವರಣಗೊಳಿಸಲಾಗಿದ್ದು, 2027ರವರೆಗೆ ಹಕ್ಕುಗಳನ್ನು ಪಡೆದುಕೊಂಡಿದೆ. ಬೆಟ್ಟಿಂಗ್-ಸಂಬಂಧಿತ ಅರ್ಜಿಗಳ ಮೇಲಿನ ನಿಷೇಧದ ನಂತರ ಬಿಸಿಸಿಐ ಡ್ರೀಮ್ 11 ಜೊತೆಗಿನ ಒಪ್ಪಂದವನ್ನು ಮುಕ್ತಾಯಗೊಳಿಸಿದ ನಂತರ ಈ ಬೆಳವಣಿಗೆ ಸಂಭವಿಸಿದೆ. ಒಪ್ಪಂದದಡಿಯಲ್ಲಿ, ಅಪೊಲೊ ಟೈರ್ಸ್ ಬಿಸಿಸಿಐಗೆ ಪ್ರತಿ ಪಂದ್ಯಕ್ಕೆ 4.5 ಕೋಟಿ ರೂ. ಪಾವತಿಸಲಿದೆ, ಇದು ಡ್ರೀಮ್ 11ನ ಹಿಂದಿನ ಕೊಡುಗೆ 4 ಕೋಟಿ ರೂ.ಗಿಂತ ಹೆಚ್ಚಾಗಿದೆ. ಈ ಒಪ್ಪಂದವು ಭಾರತದ ಕಾರ್ಯನಿರತ ಅಂತರರಾಷ್ಟ್ರೀಯ ಕ್ಯಾಲೆಂಡರ್ ಮೂಲಕ…
-
ಸುಳ್ಯ: ಭಾರತೀಯ ಗಡಿ ಭದ್ರತಾ ಪಡೆಗೆ ಆಯ್ಕೆಯಾದ ಸುಶ್ಮಿತಾ ಬೆದ್ರುಪಣೆ ಮನೆಗೆ ಶಾಸಕರ ಭೇಟಿ
ಸುಳ್ಯ,ಸೆ. 16: ಭಾರತೀಯ ಗಡಿಭದ್ರತಾ ಪಡೆಗೆ ಆಯ್ಕೆಯಾದ ಅರಂತೋಡು ಗ್ರಾಮದ ಬೆದ್ರುಪಣೆ ನಿವಾಸಿ ಕು.ಸುಶ್ಮಿತಾ ಬೆದ್ರುಪಣೆ ಮನೆಗೆ ಶಾಸಕರು ಭೇಟಿಯಾಗಿ ಅಭಿನಂದನೆ ಸಲ್ಲಿಸಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಕೇಶವ ಅಡ್ತಲೆ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಹರೀಶ ಕಂಜಿಪಿಲಿ, ಅರಂತೋಡು ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸಂತೋಷ ಕುತ್ತಮೊಟ್ಟೆ, ಮಾಜಿ ಜಿಲ್ಲಾಪಂಚಾಯತ್ ಸದಸ್ಯ ಸತೀಶ ನಾಯ್ಕ, ಅರಂತೋಡು , ಮಾಜಿ ತಾಲ್ಲೂಕು ಪಂಚಾಯತ್ ಉಪಾಧ್ಯಕ್ಷೆ ಪುಷ್ಪ ಮೇದಪ್ಪ ಉಳುವಾರು ,…
-
ಉಡುಪಿ: ಶ್ರೀಕೃಷ್ಣ ಜನ್ಮಾಷ್ಟಮಿಗೆ ಆಗಮಿಸಿದ ಆರ್.ಸಿ.ಬಿ ತಂಡ – ವಿರಾಟ್ ಕೊಹ್ಲಿ ನೋಡಿ ಎಲ್ಲರೂ ಶಾಕ್
ಉಡುಪಿ ಸೆಪ್ಟೆಂಬರ್ 16: ಈ ಬಾರಿ ಉಡುಪಿ ಶ್ರೀಕೃಷ್ಣ ಜನ್ಮಾಷ್ಠಮಿಗೆ ಆರ್ ಸಿಬಿ ತಂಡವೇ ಆಗಮಿಸಿದ್ದು, ಈ ಬಾರಿಯ ವಿಶೇಷವಾಗಿದೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್ ಆಗಿದೆ. ಉಡುಪಿಯಲ್ಲಿ ಕೃಷ್ಣ ಜನ್ಮಾಷ್ಟಮಿ ಸಂಭ್ರಮ. ಪ್ರತೀ ವರ್ಷ ಭಕ್ತರು ಸಾವಿರಾರು ಸಂಖ್ಯೆಯಲ್ಲಿ ಕಿಕ್ಕಿರಿದು ವಿಟ್ಲಪಿಂಡಿ ಉತ್ಸವಕ್ಕೆ ಸೇರುತ್ತಾರೆ. ಕೃಷ್ಣಮಠದ ಸಿಬ್ಬಂದಿ ಹಾಗೂ ಗೊಲ್ಲರು ರಥಬೀದಿ ಸುತ್ತಲೂ ಹಾಕಲಾದ ಗುರ್ಜಿಗಳಲ್ಲಿ ಇಡಲಾದ ಮಡಿಕೆ ಒಡೆದು ವಿಟ್ಲಪಿಂಡಿಗೆ ಚಾಲನೆ ನೀಡುತ್ತಾರೆ. ಇದಾದ ಬಳಿಕ ಪರ್ಯಾಯ ಯತಿ ಶ್ರೀ ಈಶಪ್ರಿಯ…