ದ್ವಿಚಕ್ರ ವಾಹನ ಸವಾರನೋರ್ವನ ಮೇಲೆ ಕಾಡು ಹಂದಿಯೊಂದು ದಾಳಿ ಮಾಡಿದ ಪರಿಣಾಮ, ಯುಕನೋರ್ವ ಗಾಯಗೊಂಡ ಘಟನೆ ಇಂದು ಮುಂಜಾನೆ ಪುತ್ತೂರು ತಾಲೂಕು ಅರಿಯಡ್ಕ ಗ್ರಾಮದ ಕೌಡಿಚ್ಚಾರು ಸಮೀಪದ ಕುರುಂಜ ಮಣ್ಣಾಪು ಎಂಬಲ್ಲಿ ನಡೆದಿದೆ.
ಸ್ಥಳೀಯ ನಿವಾಸಿ ಧನುಷ್(30) ಗಾಯಗೊಂಡವರು.ಕುಂಬ್ರ ಪೆಟ್ರೋಲ್ ಬಂಕ್ ನಲ್ಲಿ ಮ್ಯಾನೇಜರ್ ಆಗಿರುವ ಧನುಷ್ ಎಂದಿನಂತೆ ಇಂದು ಬೆಳಗ್ಗೆ ಸ್ಕೂಟರ್ ನಲ್ಲಿ ಪೆಟ್ರೋಲ್ ಬಂಕ್ ಗೆ ಹೋಗುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಕುರುಂಜ ಮಣ್ಣಾಪು ತಲುಪಿದಾಗ ಏಕಾಏಕಿ ಕಾಡು ಹಂದಿಯೊಂದು ಧನುಷ್ ಚಲಾಯಿಸುತ್ತಿದ್ದ ಸ್ಕೂಟರ್ ಮೇಲೆ ಎರಗಿದೆ. ಈ ವೇಳೆ ಧನುಷ್ ನಿಯಂತ್ರಣ ತಪ್ಪಿ ಕೆಳಗೆ ಬಿದ್ದಿದ್ದಾನೆ. ಬಳಿಕ ಕಾಡುಹಂದಿ ಧನುಷ್ ಮೇಲೆ ಎರಗಿದ್ದು, ಅವರ ಬಲ ಕೈಗೆ ಕಚ್ಚಿ ಗಂಭೀರವಾಗಿ ಗಾಯಗೊಳಿಸಿದೆ. ಇದರೊಂದಿಗೆ ಆತನ ಇತರ ದೇಹದ ಭಾಗಗಳಿಗೆ ಗಾಯಗೊಳಿಸಿದೆ. ಗಾಯಾಳುವನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
-
ನೆಹರು ಮೆಮೋರಿಯಲ್ ಕಾಲೇಜಿನ ನೇಚರ್ ಕ್ಲಬ್ ವತಿಯಿಂದ ಎರಡು ದಿನಗಳ ಪ್ರಕೃತಿ ಶಿಬಿರ ಮತ್ತು ಟ್ರೆಕ್ಕಿಂಗ್

ಸುಳ್ಯದ ನೆಹರು ಮೆಮೋರಿಯಲ್ ಕಾಲೇಜಿನ ಜೀವಶಾಸ್ತ್ರ ವಿಭಾಗಗಳಾದ ಸಸ್ಯಶಾಸ್ತ್ರ (Botany), ಪ್ರಾಣಿಶಾಸ್ತ್ರ (Zoology) ಹಾಗೂ ರಸಾಯನಶಾಸ್ತ್ರ (Chemistry) ವಿಭಾಗಗಳು ಹಾಗೂ ಪ್ರಕೃತಿ ಕ್ಲಬ್ ಸಂಯುಕ್ತ ಆಶ್ರಯದಲ್ಲಿ 2025ರ ಡಿಸೆಂಬರ್ 16 ಮತ್ತು 17ರಂದು ಕೊಲ್ಲಮೊಗ್ರ ಗ್ರಾಮದ ಬಂಬಿಲ ಮನೆಯಲ್ಲಿ ಎರಡು ದಿನಗಳ ಪ್ರಕೃತಿ ಶಿಬಿರ ಮತ್ತು ಮಾಯಿಲ ಕೋಟೆ ಟ್ರೆಕ್ಕಿಂಗ್ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ಶಿಬಿರವನ್ನು ಕೊಲ್ಲಮೊಗ್ರ ಗ್ರಾಮದ ಬಂಬಿಲ ದುರ್ಗಾದಾಸ್ ರವರ ಕೃಷಿ ಭೂಮಿಯಲ್ಲಿ ಏರ್ಪಡಿಸಿದ್ದು ಮೊದಲ ದಿನ ವಿದ್ಯಾರ್ಥಿಗಳು ಅಡಿಕೆ ತೋಟದ ಕೆಲಸ ಕಾರ್ಯಗಳಲ್ಲಿ…
-
NMC: ಸುವರ್ಣ ಮಹೋತ್ಸವ ಸಮಾರಂಭಕ್ಕೆ ಪೂರ್ವಭಾವಿಯಾಗಿ ಹಿರಿಯ ವಿದ್ಯಾರ್ಥಿ ಸಂಘದ ಸಭೆ

ನಿವೃತ್ತ ಉಪನ್ಯಾಸಕ ವೃಂದ, ಸಿಬ್ಬಂದಿಗಳು ಮತ್ತು ಗಣ್ಯರು ಭಾಗಿ ಎನ್.ಎಂ.ಸಿ, ಸುಳ್ಯ: ಕೆವಿಜಿ ಸಮೂಹ ಸಂಸ್ಥೆಗಳ ಮಾತೃ ಸಂಸ್ಥೆ ದಿವಂಗತ ಕುರುಂಜಿ ವೆಂಕಟರಮಣ ಗೌಡರು ಸ್ಥಾಪಿಸಿದ ನೆಹರು ಮೆಮೋರಿಯಲ್ ಕಾಲೇಜು ಶಿಕ್ಷಣ ಕ್ಷೇತ್ರದಲ್ಲಿ ಐದು ದಶಕಗಳ ಸಾಧನೆ, ಸೇವೆ ಮತ್ತು ಊರಿನ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾಗಿ ಸುಳ್ಯದ ಬೆಳವಣಿಗೆಗೆ ಕಾರಣವಾಗಿರುವ ಹಿರಿಯ ವಿದ್ಯಾಸಂಸ್ಥೆ. 1976 ರಲ್ಲಿ ಸ್ಥಾಪನೆಯಾಗಿ ಈ ಶೈಕ್ಷಣಿಕ ವರ್ಷದಲ್ಲಿ 50 ವರ್ಷಗಳನ್ನು ಪೂರೈಸುವ ನೆಹರು ಮೆಮೋರಿಯಲ್ ಕಾಲೇಜು ಸುಳ್ಯ ಇದರ ಸುವರ್ಣ ಮಹೋತ್ಸವವನ್ನು ಆಚರಿಸುವ…
-
ಸುಳ್ಯ: ಉದ್ಯಮಿಯಾಗಿದ್ದ ಯತೀಶ್ ಕುಮಾರ್ ನಿಧನ

ಸುಳ್ಯ ನಗರ ಪಂಚಾಯತ್ ಮಾಜಿ ನಿರ್ದೇಶನ ಸದಸ್ಯರಾಗಿದ್ದ ಯತೀಶ್ ಕುಮಾರ್ ರವರು ನಿಧನರಸಗಿದ್ದಾರೆ. ಅನಾರೋಗ್ಯದಿಂದ ಇಂದು ಮುಂಜಾನೆ ಮಂಗಳೂರಿನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರಿಗೆ ಸುಮಾರು 51 ವರ್ಷ ವಯಸ್ಸಾಗಿತ್ತು. ಸುಳ್ಯದಲ್ಲಿ ಗುತ್ತಿಗೆದಾರರಾಗಿ, ಉದ್ಯಮಿಯಾಗಿದ್ದ ಯತೀಶ್ ರವರು ಇತ್ತೀಚೆಗೆ ಮಂಗಳೂರಿನಲ್ಲಿ ನೆಲೆಸಿದ್ದರು. ಅಲ್ಲೇ ಕಂಪೆನಿಯೊಂದರಲ್ಲಿ ಕೆಲಸದಲ್ಲಿದ್ದರು ಎಂದು ತಿಳಿದು ಬಂದಿದೆ.
