ಕೆವಿಜಿ ಮಾತೃ ಸಂಸ್ಥೆ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ 78 ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಅಗಸ್ಟ್ 15 ಗುರುವಾರದಂದು ನೆರವೇರಿತು.
ಅಕಾಡೆಮಿ ಆಪ್ ಲಿಬರಲ್ ಎಜುಕೇಷನ್ ಸುಳ್ಯದ ಅಧ್ಯಕ್ಷರಾದ ಡಾ. ಕೆ.ವಿ. ಚಿದಾನಂದ ಇವರು ದ್ವಜಾರೋಹಣ ನೆರವೇರಿಸಿದರು.


ನೆಹರೂ ಮೆಮೋರಿಯಲ್ ಕಾಲೇಜಿನ ಆಡಳಿತಾಧಿಕಾರಿ ಚಂದ್ರಶೇಖರ್ ಪೇರಾಲು ಮಾದಕ ವ್ಯಸನ ಮುಕ್ತ ದೇಶಕ್ಕಾಗಿ ಪ್ರತಿಜ್ಞಾ ವಿಧಿ ಬೋಧಿಸಿದರು. ಈ ಸಂದರ್ಭದಲ್ಲಿ ನೆಹರೂ ಮೆಮೋರಿಯಲ್ ಕಾಲೇಜಿನ ಪ್ರಾಂಶುಪಾಲರಾದ ಡಾ. ರುದ್ರಕುಮಾರ್ ಎಂ. ಎಂ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರತ್ನಾವತಿ ಡಿ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಮಿಥಾಲಿ ಪಿ ರೈ, ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಗೌರವ ಶೈಕ್ಷಣಿಕ ಸಲಹೆಗಾರರಾದ ಪ್ರೊ. ಬಾಲಚಂದ್ರ ಎಂ, ಡಾ. ಪ್ರಭಾಕರ ಶಿಶಿಲ, ಪ್ರೊ ಜವರೇ ಗೌಡ, ಕಾಲೇಜಿನ ವಿವಿಧ ಘಟಕಗಳ ಅಧಿಕಾರಿಗಳು ಮತ್ತು ವಿದ್ಯಾರ್ಥಿಗಳು, ಪದವಿ ಹಾಗೂ ಪದವಿ ಪೂರ್ವ ಕಾಲೇಜಿನ ಭೋದಕ ಭೋದಕೇತರ ವೃಂದದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *