Advertisement

ಸಂತ ಪಿಲೋಮಿನಾ ಕಾಲೇಜಿನಲ್ಲಿ ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶ ಹಾಗೂ ವಿದ್ಯಾರ್ಥಿ ಸಂಘ ಜಂಟಿಯಾಗಿ 2022-23ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ ಮಾಹಿತಿ ಕಾರ್ಯಕ್ರಮ ಕಾಲೇಜಿನ ಸ್ಪಂದನ ಸಭಾಂಗಣದಲ್ಲಿ ಜರುಗಿತು.

ಅಧ್ಯಕ್ಷತೆಯನ್ನು ಕಾಲೇಜಿನ ಉಪ ಪ್ರಾಂಶುಪಾಲ ಪ್ರೊ.ಗಣೇಶ್ ಭಟ್ ವಹಿಸಿ,ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ ಅವರ ಜವಾಬ್ದಾರಿಗಳು ಮತ್ತು ಅವುಗಳನ್ನು ನಿಭಾಯಿಸುವ ಪರಿ ಹೇಗೆ ಎನ್ನುವ ನುಡಿಗಳೊಂದಿಗೆ 64 ವರ್ಷಗಳ ಇತಿಹಾಸವುಳ್ಳ ಈ ಕಾಲೇಜಿನ ಆಶೋತ್ತರಗಳಿಗೆ ಸದಾ ಸ್ಪಂದಿಸುವ ಮನೋಭಾವವನ್ನು ಹೊಂದಿರಬೇಕು ಹಾಗೂ ಕಾಲೇಜಿನ ಶಿಸ್ತು ಪರಿಪಾಲನೆಯ ಕಡೆಗೆ ವಿಶೇಷ ಗಮನ ಹರಿಸಬೇಕು. ಎಂದು ಕರೆ ನೀಡಿದರು. ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶದ ಸಂಯೋಜಕ ಹಾಗೂ ಕಾಲೇಜಿನ ಉಪ ಪ್ರಾಂಶುಪಾಲ ಡಾ. ಎ.ಪಿ.ರಾಧಾಕೃಷ್ಣ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ನಾಯಕತ್ವಗುಣ ಹಾಗೂ ಕಾಲೇಜಿನಲ್ಲಿ ದೊರಕುವ ಅವಕಾಶಗಳ ಸದುಪಯೋಗದಿಂದ ಕ್ರಿಯಾಶೀಲರಾಗಿ ಮುನ್ನಡೆದು ಮುಂದೆ ದೇಶದ ಸಜೆಗಳಾಗಿ ಬಾಳಬೇಕು ಎಂದು
ನುಡಿದರು. ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಗಳಾದ ಡಾ. ಚಂದ್ರಶೇಖರ್ ಹಾಗೂ ಭಾರತಿ ಎಸ್. ರೈ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಕಾರ್ಯನಿರ್ವಹಿಸುವ ವಿಧಾನದ ಬಗ್ಗೆ ಕಾರ್ಯಕ್ರಮಗಳ ಬಗ್ಗೆ ವಿವರಿಸಿದರು.

ವಿನ್ಸನ್ ಜೋಯ್ ಮಿನೇಜಸ್ ಹಾಗೂ ನಾಗ ಪ್ರಸಾದ್ ಪ್ರಾರ್ಥಿಸಿದರು. ವಿದ್ಯಾರ್ಥಿ ಸಂಘದ ಅಧ್ಯಕ್ಷ ಮಹಮ್ಮದ್ ಅಕಿ‌ ಸ್ವಾಗತಿಸಿದರು. ಜೊತೆ ಕಾರ್ಯದರ್ಶಿ ಶಿವಾನಿ ವಂದಿಸಿ, ಕಾರ್ಯದರ್ಶಿ ಅನುಶ್ರೀ ನಿರೂಪಿಸಿದರು.

Advertisement

By namma.sullia

ಅಂಗೈಯಲ್ಲಿ ನಮ್ಮ ಸುಳ್ಯ

Leave a Reply

Your email address will not be published. Required fields are marked *

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ