ಕಾರಿನಲ್ಲೇ ವ್ಯಕ್ತಿಯೊಬ್ಬರು ಉಸಿರುಗಟ್ಟಿ ಮೃತಪಟ್ಟ ದಾರುಣ ಘಟನೆ ಮಣಿಪಾಲದಲ್ಲಿ ಸಂಭವಿಸಿದೆ ಚಿಕ್ಕಮಗಳೂರು ಮೂಲದ ಆನಂದ (37) ಸಾವನ್ನಪ್ಪಿರುವವರು. ಇವರು ರೋಗಿಯೊಬ್ಬರನ್ನು ಆಸ್ಪತ್ರೆಗೆ ಕರೆದುಕೊಂಡು ಬಂದು ಮಣಿಪಾಲ ಕೆಎಂಸಿ ಆಸ್ಪತ್ರೆಯ ಪಾರ್ಕಿಂಗ್‌ ಸ್ಥಳದಲ್ಲಿ ಪಾರ್ಕ್ ಮಾಡಿದ ಕಾರಿನಲ್ಲಿ ರಾತ್ರಿ‌ ಮಲಗಿಕೊಂಡಿದ್ದರು.ಕಾರಿನ ಗ್ಲಾಸನ್ನು ಮುಚ್ಚಿಕೊಂಡು ಮಲಗಿದ್ದರಿಂದ ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *