Advertisement

ಪುತ್ತೂರು: ಇಲ್ಲಿನ ಸಂತ ವಿಕ್ಟರ್ ಪ್ರೌಢಶಾಲೆಯ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿಯೊಬ್ಬಳು ಅನಾರೋಗ್ಯದಿಂದಾಗಿ ಮೃತಪಟ್ಟ ಘಟನೆ ನ.12ರಂದು ನಡೆದಿದೆ. ನೆಲ್ಲಿಕಟ್ಟೆ ನಿವಾಸಿ ಸತೀಶ್ ಭಂಡಾರಿ ಎಂಬವರ ಪುತ್ರಿ ಹಿಮಾನಿ(16ವ.)ಮೃತಪಟ್ಟ ವಿದ್ಯಾರ್ಥಿ . ನ.11 ರಂದು ರಾತ್ರಿ ಸ್ವಲ್ಪಮಟ್ಟಿನ ಅನಾರೋಗ್ಯವಿತ್ತಾದರೂ ಅದನ್ನು ಲೆಕ್ಕಿಸಿರಲಿಲ್ಲ.

ಆದರೆ ನ.12ರ ಬೆಳಿಗ್ಗೆ ಹಿಮಾನಿಯವರ ಆರೋಗ್ಯದಲ್ಲಿ ಏರುಪೇರಾಗಿರುವುದನ್ನು ಗಮನಿಸಿದ ಮನೆಯವರು ಆಕೆಯನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ದರು. ಅಲ್ಲಿಂದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಫಾದರ್ ಮುಲ್ಲರ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಪಟ್ಟಿದ್ದಾರೆ.

Advertisement

By namma.sullia

ಅಂಗೈಯಲ್ಲಿ ನಮ್ಮ ಸುಳ್ಯ

Leave a Reply

Your email address will not be published. Required fields are marked *

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ