ದ್ವಿಚಕ್ರ ವಾಹನ ಸವಾರನೋರ್ವನ ಮೇಲೆ ಕಾಡು ಹಂದಿಯೊಂದು ದಾಳಿ ಮಾಡಿದ ಪರಿಣಾಮ, ಯುಕನೋರ್ವ ಗಾಯಗೊಂಡ ಘಟನೆ ಇಂದು ಮುಂಜಾನೆ ಪುತ್ತೂರು ತಾಲೂಕು ಅರಿಯಡ್ಕ ಗ್ರಾಮದ ಕೌಡಿಚ್ಚಾರು ಸಮೀಪದ ಕುರುಂಜ ಮಣ್ಣಾಪು ಎಂಬಲ್ಲಿ ನಡೆದಿದೆ.
ಸ್ಥಳೀಯ ನಿವಾಸಿ ಧನುಷ್(30) ಗಾಯಗೊಂಡವರು.ಕುಂಬ್ರ ಪೆಟ್ರೋಲ್ ಬಂಕ್ ನಲ್ಲಿ ಮ್ಯಾನೇಜರ್ ಆಗಿರುವ ಧನುಷ್ ಎಂದಿನಂತೆ ಇಂದು ಬೆಳಗ್ಗೆ ಸ್ಕೂಟರ್ ನಲ್ಲಿ ಪೆಟ್ರೋಲ್ ಬಂಕ್ ಗೆ ಹೋಗುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಕುರುಂಜ ಮಣ್ಣಾಪು ತಲುಪಿದಾಗ ಏಕಾಏಕಿ ಕಾಡು ಹಂದಿಯೊಂದು ಧನುಷ್ ಚಲಾಯಿಸುತ್ತಿದ್ದ ಸ್ಕೂಟರ್ ಮೇಲೆ ಎರಗಿದೆ. ಈ ವೇಳೆ ಧನುಷ್ ನಿಯಂತ್ರಣ ತಪ್ಪಿ ಕೆಳಗೆ ಬಿದ್ದಿದ್ದಾನೆ. ಬಳಿಕ ಕಾಡುಹಂದಿ ಧನುಷ್ ಮೇಲೆ ಎರಗಿದ್ದು, ಅವರ ಬಲ ಕೈಗೆ ಕಚ್ಚಿ ಗಂಭೀರವಾಗಿ ಗಾಯಗೊಳಿಸಿದೆ. ಇದರೊಂದಿಗೆ ಆತನ ಇತರ ದೇಹದ ಭಾಗಗಳಿಗೆ ಗಾಯಗೊಳಿಸಿದೆ. ಗಾಯಾಳುವನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
-
ಜೆಬಿ ಯುನೈಟೆಡ್ ಆಶ್ರಯದಲ್ಲಿ ಲೆಜೆಂಡ್ ಸಾಕರ್ ಲೀಗ್; ಸಾಕರ್ ಲೆಜೆಂಡ್ ಚಾಂಪಿಯನ್, ಮಲಬಾರ್ ಲೆಜೆಂಡ್ ರನ್ನರ್ ಅಪ್
ಗಾಂಧಿನಗರ: ಜೈಭಾರತ್ ಯುನೈಟೆಡ್ ಇದರ ಆಶ್ರಯದಲ್ಲಿ ಹಿರಿಯರ ಹಾಗೂ ಹಲವು ವರ್ಷಗಳ ಹಿಂದೆ ಫುಟ್ಬಾಲ್ ಪಂದ್ಯವನ್ನಾಡುತ್ತಿದ್ದ ಆಟಗಾರರಿಗೆ ‘ ಲೆಜೆಂಡ್ ಸಾಕರ್ ಲೀಗ್’ ಫುಟ್ಬಾಲ್ ಪಂದ್ಯಾಕೂಟವನ್ನು ಮೆ.18 ರಂದು ಗಾಂಧಿನಗರ ಶಾಲಾ ಮೈದಾನದಲ್ಲಿ ನಡೆಸಲಾಯಿತು. ಒಟ್ಟು ನಾಲ್ಕು ತಂಡದ ಈ ಪಂದ್ಯಾಟದಲ್ಲಿ ಹಿರಿಯರು ತಮ್ಮ ಹಳೆಯ ಆಟವನ್ನು ಪ್ರದರ್ಶಸಿದರು. ಲೀಗ್ ಹಂತದ ಪಂದ್ಯದಲ್ಲಿ ಸಾಕರ್ ಲೆಜೆಂಡ್ ಹಾಗೂ ಮಲಬಾರ್ ಲೆಜೆಂಡ್ ತಂಡ ಒಂದು ಪಂದ್ಯವು ಕೂಡಾ ಸೋಲದ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಯಿತು. ನಂತರ ರೋಚಕ ಫೈನಲ್…
-
New Note: ಮಾರುಕಟ್ಟೆಗೆ ಮತ್ತೊಂದು ಹೊಸ ನೋಟು: RBI ಮಹತ್ವದ ಘೋಷಣೆ.!
ಭಾರತೀಯ ರಿಸರ್ವ್ ಬ್ಯಾಂಕ್ ( Reserve Bank of India – RBI) ಶೀಘ್ರದಲ್ಲೇ ಮಹಾತ್ಮ ಗಾಂಧಿ (ಹೊಸ) ಸರಣಿಯಲ್ಲಿ ಪ್ರಸ್ತುತ ಹೊಸ ಗವರ್ನರ್ ಸಂಜಯ್ ಮಲ್ಹೋತ್ರಾ ( Governor Sanjay Malhotra ) ಅವರ ಸಹಿಯನ್ನು ಹೊಂದಿರುವ ಹೊಸ ₹20 ನೋಟುಗಳನ್ನು ಬಿಡುಗಡೆ ಮಾಡಲಿದೆ ಎಂದು ತಿಳಿಸಿದೆ. ಈ ಹೊಸ ನೋಟುಗಳು ಈ ಸರಣಿಯಲ್ಲಿ ಅಸ್ತಿತ್ವದಲ್ಲಿರುವ ₹20 ನೋಟುಗಳಂತೆಯೇ ವಿನ್ಯಾಸವನ್ನು ಹೊಂದಿರುತ್ತವೆ. ಹಿಂದೆ ನೀಡಲಾದ ಎಲ್ಲಾ ₹20 ನೋಟುಗಳು ಕಾನೂನುಬದ್ಧವಾಗಿ ಉಳಿಯುತ್ತವೆ ಎಂಬುದಾಗಿ ಸ್ಪಷ್ಟ ಪಡಿಸಿದೆ.…
-
ಹೈದರಾಬಾದ್ ನ ಗುಲ್ಜಾರ್ ಹೌಸ್ ಕಟ್ಟಡದಲ್ಲಿ ಭೀಕರ ಅಗ್ನಿ ಅವಘಡ : ಮೃತಪಟ್ಟವರ ಸಂಖ್ಯೆ 17ಕ್ಕೆ ಏರಿಕೆ.!
ತೆಲಂಗಾಣ ರಾಜ್ಯದ ಹೈದರಾಬಾದ್ ಸಮೀಪದ ಚಾರ್ಮಿನಾರ್ ಬಳಿಯ ಗುಲ್ಜಾರ್ ಹೌಸ್ನಲ್ಲಿರುವ ಕಟ್ಟಡದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಇಬ್ಬರು ಮಕ್ಕಳು ಸೇರಿದಂತೆ 17 ಮಂದಿ ಸಾವನ್ನಪ್ಪಿದ್ದಾರೆ. ಇಂದು ಬೆಳಿಗ್ಗೆ 6 ಗಂಟೆಗೆ ಬೆಂಕಿ ಕಾಣಿಸಿಕೊಂಡಿದೆ. 11 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ತಲುಪಿವೆ. ಬೆಂಕಿಗೆ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಹೈದರಾಬಾದ್ನ ಅಗ್ನಿಶಾಮಕ ಅಧಿಕಾರಿ ತಿಳಿಸಿದ್ದಾರೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ದೌಡಾಯಿಸಿದ್ದು ದುರಂತದಲ್ಲಿ 17 ಜನರು ಸಾವನ್ನಪ್ಪಿದ್ದಾರೆ. ಕಟ್ಟದದಲ್ಲಿ ಸಿಲುಕಿದವರ ರಕ್ಷಣಾ…