Advertisement

ಪುತ್ತೂರು: ಮತದಾರರ ಪಟ್ಟಿ ಹಗರಣಕ್ಕೆ ಸಂಬಂಧಿಸಿದಂತೆ ಪುತ್ತೂರಿನಲ್ಲಿ ಸಹಾಯಕ ಆಯುಕ್ತರು(ಎಸಿ) ನಗರದಲ್ಲಿ ಕಾರ್ಯಾಚರಿಸುತ್ತಿದ್ದ ಖಾಸಗಿ ಸಂಸ್ಥೆಯೊಂದಕ್ಕೆ ಬೀಗ ಜಡಿದ ಘಟನೆ ನಡೆದಿದೆ. ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ ಎಂಬುದರ ಬಗ್ಗೆ ದೂರು ಕೇಳಿ ಬಂದ ಹಿನ್ನೆಲೆಯಲ್ಲಿ ಪುತ್ತೂರಿನ ಕಿಲ್ಲೆ ಮೈದಾನದ ಸಮೀಪ ಎಸ್ ಬಿ ಐ ಬ್ಯಾಂಕಿನ ಮುಂಭಾಗ ಕಾರ್ಯಚರಿಸುತ್ತಿರುವ ಮೇದಿನಿ ಜನಸೇವಾ ಕೇಂದ್ರಕ್ಕೆ ದಾಳಿ ನಡೆಸಿ ಸಹಾಯ ಆಯುಕ್ತರು ಕಚೇರಿಗೆ ಬೀಗ ಜಡಿದಿದ್ದಾರೆ ಎಂದು‌ ತಿಳಿದು ಬಂದಿದೆ.

ಸರಕಾರದ ಅನುಮತಿಯಿಲ್ಲದೆ ಯಾವುದೇ ಖಾಸಗಿ ಸಂಸ್ಥೆಗಳು ಚುನಾವಣಾ ಐಡಿ ಕಾರ್ಡ್ ಗಳನ್ನು ಡೌನ್ ಲೋಡ್ ಯಾ ಮುದ್ರಿಸಿ ಕೊಡುವಂತಿಲ್ಲ ಎಂಬ ನಿಯಮಗಳಿದ್ದು, ಅದನ್ನು ಉಲ್ಲಂಘಿಸಿ ಮೇದಿನಿಯು ವೋಟರ್ ಐಡಿ ಕಾರ್ಡ್ ಮುದ್ರಿಸಿ ಕೊಟ್ಟಿರುವ ಬಗ್ಗೆ ಸಹಾಯಕ ಆಯುಕ್ತರಿಗೆ ದೂರುಗಳು ಬಂದಿದ್ದವು ಎನ್ನಲಾಗಿದೆ. ಈ ಹಿನ್ನಲೆಯಲ್ಲಿ ಕಾರ್ಯಚರಣೆ ನಡೆದಿದೆ ಎಂದು ತಿಳಿದು ಬಂದಿದೆ.

Advertisement

By namma.sullia

ಅಂಗೈಯಲ್ಲಿ ನಮ್ಮ ಸುಳ್ಯ

Leave a Reply

Your email address will not be published. Required fields are marked *

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ