Advertisement

ಹಾವೇರಿ: ಕಾರಿಗೆ ಸರಕಾರಿ ಬಸ್ ಒಂದು ಡಿಕ್ಕಿ ಹೊಡೆದ ಪರಿಣಾಮ ಕಾಸರಗೋಡು ಮೂಲದ ಇಬ್ಬರು ಸ್ಥಳದಲ್ಲೇ ಮೃತಪಟ್ಟ ದುರ್ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಬೆಳಗಲಪೇಟೆ ಬಳಿ ನಡೆದಿದೆ. ಕೇರಳದ ಕಾಸರಗೋಡು ಜಿಲ್ಲೆಯ ತಳಂಗರೆ ನುಸ್ರ ತ್ ನಗರದ ಮುಹಮ್ಮದ್ (65) ಹಾಗೂ ಪತ್ನಿ ಆಯಿಷಾ(62) ಅಪಘಾತದಲ್ಲಿ ಮೃತಪಟ್ಟ ದುರ್ದೈವಿಗಳು. ಹುಬ್ಬಳ್ಳಿಯಿಂದ ಹಾನಗಲ್ ಕಡೆ ಹೊರಟಿದ್ದ ಕಾರಿಗೆ ಬಸ್ ಡಿಕ್ಕಿ ಹೊಡೆದಿದೆ. ಮೃತರ ಪುತ್ರ ಝಿಯಾದ್, ಸೊಸೆ ಹಾಗೂ ಮೊಮ್ಮಕ್ಕಳು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

Advertisement

By namma.sullia

ಅಂಗೈಯಲ್ಲಿ ನಮ್ಮ ಸುಳ್ಯ

Leave a Reply

Your email address will not be published. Required fields are marked *

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ