ಸುರತ್ಕಲ್: ಶಾಲೆಗೆ ಹೊರಡಲು ಸಿದ್ದನಾಗುತ್ತಿದ್ದ ಬಾಲಕ ಹೃದಯಾಘಾತಕ್ಕೆ ತುತ್ತಾಗಿ ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ ಸುರತ್ಕಲ್ ನಲ್ಲಿ ನಡೆದಿದೆ. ಇಲ್ಲಿನ ಕೃಷ್ಣಾಪುರ 7ನೇ ಬ್ಲಾಕ್ ನಿವಾಸಿ ಮೊಹಮ್ಮದ್ ಹಸೀಮ್ (17) ಮೃತ ಬಾಲಕ. ಬೆಳಗ್ಗೆ ಸಿದ್ದನಾಗಿದ್ದ ಹಸೀಮ್ಗೆ ಏಕಾಏಕಿ ತಲೆ ಸುತ್ತು ಬಂದು ಬಿದ್ದಿದ್ದು, ಮನೆಮಂದಿ ತತ್ಕ್ಷಣ ಸಮೀಪದ ಆಸ್ಪತ್ರೆಗೆ ಕರೆದೊಯ್ದರು. ಆದರೆ ಅಲ್ಲಿ ಮೃತಪಟ್ಟಿರುವ ಬಗ್ಗೆ ವೈದ್ಯರು ತಿಳಿಸಿದ್ದು, ಬದುಕುಳಿಯುವ ಆಸೆಯಿಂದ ಪೋಷಕರು ಮುಕ್ಕದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಅದಾಗಲೇ ಆತ ಮೃತಪಟ್ಟ ಬಗ್ಗೆ ವೈದ್ಯರು ದೃಢಪಡಿಸಿದರು.ಖಾಸಗಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಮಾಡಲು ಮುಂದಾದಾಗ ಪೋಷಕರು ಮೃತದೇಹವನ್ನು ಕೊಂಡೊಯ್ಯುವ ಬಗ್ಗೆ ವೈದ್ಯರಲ್ಲಿ ತಿಳಿಸಿದ್ದರು. ಆದರೆ ವೈದ್ಯರು ಮರಣೋತ್ತರ ಪರೀಕ್ಷೆ ನಡೆಸದೆ ಬಿಟ್ಟುಕೊಡಲು ಒಪ್ಪಲಿಲ್ಲ. ಈ ಬಗ್ಗೆ ಗೊಂದಲ ಉಂಟಾದ ಕಾರಣ ಮಾಜಿ ಶಾಸಕ ಮೊದಿನ್ ಬಾವಾ ಅವರು ಸ್ಥಳಕ್ಕೆ ಆಗಮಿಸಿ ಬಾಲಕನ ಅಂತ್ಯಕ್ರಿಯೆಗೆ ಬೇಕಾದ ವ್ಯವಸ್ಥೆ ಮಾಡಿಕೊಟ್ಟರು.
ದಕ್ಷಿಣ ಕನ್ನಡದ ಹಾಗೂ ಕೊಡಗು ಗಡಿಭಾಗದಲ್ಲಿನ ಜನತೆ ಮತ್ತೆ ಆತಂಕಕ್ಕೀಡಾಗಿದ್ದಾರೆ.ಈ ಮೊದಲು 2018ರಲ್ಲಿ ಸಮೀಪದ ಸಂಪಾಜೆ ಗುಡ್ಡೆಗದ್ದೆಯಲ್ಲಿ ನಕ್ಸಲ್ ತಂಡ…
ನೆಹರೂ ಮೆಮೋರಿಯಲ್ ಕಾಲೇಜಿನ ವಾಣಿಜ್ಯ ಸಂಘ ಮತ್ತು ಐಕ್ಯೂಎಸಿ ವತಿಯಿಂದ ಹಮ್ಮಿಕೊಂಡ ವಿಶ್ವ ಗ್ರಾಹಕ ಹಕ್ಕುಗಳ ದಿನಾಚರಣೆ ಕುರಿತಾಗಿ…
ಗಾಜಾ: ಆಹಾರದ ನೆರವಿಗಾಗಿ ಕಾಯುತ್ತಿದ್ದ ಸಂತ್ರಸ್ತರಿದ್ದ ಶೆಲ್ ಮೇಲೆ ದಾಳಿ ನಡೆದಿದ್ದು, 20 ಮಂದಿ ಸಾವನ್ನಪ್ಪಿದ್ದಾರೆ. 155 ಕ್ಕೂ ಹೆಚ್ಚು ಜನರು…
ಸುಳ್ಯದ ಕುರಂಜಿ ವೆಂಕಟರಮಣಗೌಡ ಪಾಲಿಟೆಕ್ನಿಕ್ ನ ಸಿವಿಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿ ಸಂಘ ದ 2023- 24 ನೇ ಸಾಲಿನ…
ಮಂಗಳೂರು: ಗುರುವಾರ ರಾತ್ರಿ ನಡೆದ ಬೆಳವಣಿಗೆಯಲ್ಲಿ 2023ರ ವಿಧಾನಸಭಾ ಚುನಾವಣೆಯಲ್ಲಿ ಕಾರ್ಯಕರ್ತರ ಬಂಡಾಯದ ಫಲವಾಗಿ ಬಿಜೆಪಿ ಅಧಿಕೃತ ಅಭ್ಯರ್ಥಿಗೆ ಪ್ರತಿಯಾಗಿ…
ಸುಳ್ಯ,ಮಾ 13: ಬೆಳ್ಳಾರೆ ಕೇಂದ್ರ ಜುಮಾ ಮಸೀದಿಯ ಜಮಾಅತ್ ಗೆ ಒಳಪಟ್ಟ ಬೆಳ್ಳಾರೆ ನಿವಾಸಿ ಇಂಜಿನಿಯರ್ ಆರಿಫ್ ರವರ ತಂದೆ…