ಉತ್ತರ ಕನ್ನಡದ ಶಿರೂರಿನಲ್ಲಿ ಉಂಟಾದ ಗುಡ್ಡ ಕುಸಿತದಿಂದಾಗಿ ಲಾರಿ ಸಮೇತ ಗಂಗಾವಳಿ ನದಿಯಲ್ಲಿ ಮುಳುಗಿ ಸಾವಿಗೀಡಾಗಿದ್ದ ಕೇರಳದ ಕಣ್ಣೂರಿನ ಚಾಲಕ ಅರ್ಜುನ್ ಅವರ ಸಹೋದರಿ ಅಂಜು, ಲಾರಿ ಮಾಲೀಕ ಮನಾಫ್ ವಿರುದ್ಧ ಮಾನಹಾನಿ ಪ್ರಕರಣ ದಾಖಲಿಸಿದ್ದಾರೆ.ಮನಾಫ್ ಅವರು ತಮ್ಮ ಕುಟುಂಬದ ಭಾವನಾತ್ಮಕ ಪರಿಸ್ಥಿತಿಯನ್ನು ಬಂಡವಾಳವನ್ನಾಗಿಸಿಕೊಂಡು, ಮೃತ ಸಹೋದರನ ಫೋಟೊ ಬಳಸಿ ಪ್ರಚಾರ ಪಡೆಯುತ್ತಿದ್ದಾರೆ.

ಚೆರುವಾಯೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಯೂಟ್ಯೂಬ್ ಚಾನೆಲ್ ಪ್ರಾರಂಭಿಸಿ ಕುಟುಂಬದ ಹೆಸರಿಗೆ ಕಳಂಕ ತರುತ್ತಿದ್ದಾರೆ ಎಂದು ಅಂಜು ದೂರಿನಲ್ಲಿ ಹೇಳಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಕುಟುಂಬದ ಬಗ್ಗೆ ಮಾನಹಾನಿ ಪ್ರಚಾರ ಮಡುತ್ತಿರುವವರ ವಿರುದ್ದವೂ ದೂರು ನೀಡಿದ್ದಾರೆ.

ಈ ವಿಷಯವನ್ನು ಮಾಧ್ಯಮಗಳಿಗೆ ತಿಳಿಸಿದ ಬಳಿಕ, ತನ್ನ ಹಾಗೂ ತನ್ನ ಕುಟುಂಬದ ವಿರುದ್ಧ ಸೈಬರ್ ದಾಳಿ ನಡೆಸಲು ಸಮುದಾಯದ ದ್ವೇಷವನ್ನು ಪ್ರಚೋದಿಸುವ ರೀತಿಯಲ್ಲಿ ಪರಿಸ್ಥಿತಿಯನ್ನು ಮನಾಫ್ ಸೃಷ್ಟಿಸಿದ್ದಾರೆ ಎಂದು ದೂರಿನಲ್ಲಿ ಅಂಜು ಆರೋಪಿಸಿದ್ದಾರೆ.

ಕುಟುಂಬದ ಪರಿಸ್ಥಿತಿಯನ್ನು ಮನಾಫ್ ವೈಯಕ್ತಿಕ ಲಾಭಕ್ಕಾಗಿ ಬಳಸುತ್ತಿದ್ದಾರೆ, ಹಣವನ್ನೂ ಸಂಗ್ರಹಿಸುತ್ತಿದ್ದಾರೆ ಎಂದು ಆರೋಪಿಸಿ ಕುಟುಂಬಸ್ಥರು ತಮ್ಮ ಮನೆಯಲ್ಲಿ ಬುಧವಾರ ಮಾಧ್ಯಮಗೋಷ್ಠಿ ನಡೆಸಿದ್ದರು.

ಅವರು ತಮ್ಮನ್ನು ನಿರ್ಗತಿಕರು ಎಂದು ನಿರೂಪಿಸುತ್ತಿದ್ದಾರೆ. ಇದು ಕುಟುಂಬಸ್ಥರಿಗೆ ನೋವುಂಟುಮಾಡಿದೆ’ ಎಂದು ಮಾಧ್ಯಮಗೋಷ್ಠಿಯಲ್ಲಿ ಹೇಳಿದ್ದರು.

ಮನಾಫ್ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್‌ 192 (ಗಲಭೆಗೆ ಕುಮ್ಮಕ್ಕು) ಹಾಗೂ ಕೇರಳ ಪೊಲೀಸ್ ಕಾಯ್ದೆಯ ಸೆಕ್ಷನ್ 120 (O) (ಸಾರ್ವಜನಿಕ ಶಾಂತಿ ಭಂಗ ಮತ್ತು ಅಶಾಂತಿ ಉಂಟುಮಾಡುವುದು) ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಕುಟುಂಬದ ಆರೋಪಕ್ಕೆ ಪ್ರತಿಕ್ರಿಯಿಸಿರುವ ಮನಾಫ್, ‘ನಾನು ಯಾವುದೇ ವಿವಾದ ಸೃಷ್ಠಿ ಮಾಡಲು ಬಯಸಯವುದಿಲ್ಲ. ನಾನು ಭಾವನಾತ್ಮಕವಾಗಿ ತೆಗೆದುಕೊಂಡಿದ್ದೇನೆ’ ಎಂದು ಹೇಳಿದ್ದಾರೆ. ಅಲ್ಲದೆ ವಿಷಯಗಳು ತಪ್ಪು ದಾರಿ ಹಿಡಿದುದ್ದಕ್ಕೆ ಕ್ಷಮೆ ಯಾಚಿಸುತ್ತೇನೆ ಎಂದಿದ್ದಾರೆ.

ಗಂಗಾವಳಿ ನದಿಗೆ ಬಿದ್ದಿದ್ದ ಲಾರಿ ಹಾಗೂ ಮೃತದೇಹ ಹೊರತೆಗೆಯವ ಕಾರ್ಯಾಚರಣೆ 70ಕ್ಕೂ ಅಧಿಕ ದಿನ ನಡೆದಿತ್ತು. ಈ ವೇಳೆ ಮನಾಫ್ ಸ್ಥಳದಲ್ಲಿಯೇ ಇದ್ದರು.

Leave a Reply

Your email address will not be published. Required fields are marked *