ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಾರ್ಮಿಕ ವಿಭಾಗದ ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ಎಚ್ ಎಮ್ ಹಮೀದ್ ಬೆಳ್ಳಾರೆ ಇವರು ಆಯ್ಕೆಯಾಗಿದ್ದಾರೆ. ಕೆಪಿಸಿಸಿ ಕಾನೂನು ಹಾಗೂ ಮಾಹಿತಿ ಹಕ್ಕುಗಳ ವಿಭಾಗದ ರಾಜ್ಯ ಉಪಾಧ್ಯಕ್ಷರಾದ ಡಾಕ್ಟರ್‌ ಎ ಜೆ ಅಕ್ರಮ್ ಪಾಷಾರವರ ಶಿಫಾರಸಿನ ಮೇರೆಗೆ ಕೆಪಿಸಿಸಿ ಕಾರ್ಮಿಕ ವಿಭಾಗದ ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ, ಝಕರಿಯ ಜುಮ್ಮಾ ಮಸೀದಿ ಬೆಳ್ಳಾರೆ ಇದರ ಆಡಳಿತ ಸಮಿತಿ ಸದಸ್ಯರಾದ ಹಮೀದ್‌ ಎಚ್ ಎಂ ಬೆಳ್ಳಾರೆ ಇವರನ್ನು ನೇಮಕ ಮಾಡಲಾಗಿದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *