Advertisement

ಕರ್ನಾಟಕದ ಹೆಮ್ಮೆಯ ಪ್ರತೀಕ ನಂದಿನಿ ಹಾಲು ಉತ್ಪನ್ನಗಳಿಗೆ (Nandini Product) ರಾಯಭಾರಿಯಾಗಿ ಸ್ಯಾಂಡಲ್ ವುಡ್ ನ ಹೆಸರಾಂತ ನಟ ಶಿವರಾಜ್ ಕುಮಾರ್ ಆಯ್ಕೆಯಾಗಿದ್ದಾರೆ. ಇಂದು ಶಿವರಾಜ್ ಕುಮಾರ್ ಜೊತೆ ಕೆಎಂಎಫ್ ಅಧಿಕಾರಿಗಳು ಮಾತುಕತೆ ನಡೆಸಿ, ಶಿವರಾಜ್ ಕುಮಾರ್ (Shivaraj Kumar) ಅವರನ್ನು ಒಪ್ಪಿಸಿದ್ದಾರೆ. ಈ ಸಂದರ್ಭದಲ್ಲಿ ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಸೇರಿದಂತೆ ಹಲವರು ಹಾಜರಿದ್ದರು. ಕೆಎಂಎಫ್ (KMF) ಗೂ ಡಾ.ರಾಜ್ ಕುಟುಂಬಕ್ಕೂ ಹತ್ತಿರದ ನಂಟಿದೆ. 1996ರಲ್ಲಿ ಡಾ.ರಾಜ್ ಕುಮಾರ್ ಅವರು ನಂದಿನಿ ಉತ್ಪನ್ನಗಳಿಗೆ ರಾಯಭಾರಿಯಾಗಿ (Ambassador) ಒಪ್ಪಿಕೊಂಡರು.

ಇಲೆಕ್ಟ್ರಾನಿಕ್ ಪ್ರೌಡಕ್ಟ್ಸ್’ಗಳಲ್ಲಿ ಒರಿಜಿನಲ್ ಅಥವಾ ಡೂಪ್ಲಿಕೇಟ್ ಹೇಗೆ ಕಂಡುಹಿಡಿಯುವುದು.

ಉಚಿತವಾಗಿಯೇ ಅದನ್ನು ಮಾಡಿಕೊಂಡು ಬಂದರು. ಡಾ.ರಾಜ್ ಕುಮಾರ್ ಕಾಣಿಸಿಕೊಂಡ ಏಕೈಕ ಜಾಹೀರಾತು ಅದಾಗಿತ್ತು. ಡಾ.ರಾಜ್ ಕುಮಾರ್ ಮರಣಾನಂತರ ಆ ಜವಾಬ್ದಾರಿಯನ್ನು ಪುನೀತ್ ರಾಜ್ ಕುಮಾರ್ (Puneeth) ಮುಂದುವರೆಸಿಕೊಂಡು ಹೋಗುತ್ತಿದ್ದರು. ಪುನೀತ್ ನಿಧನಾನಂತರ ಮತ್ತೆ ಡಾ.ರಾಜ್ (Raj Kumar) ಕುಟುಂಬಕ್ಕೆ ಆ ಸೇವೆ ಹುಡುಕಿಕೊಂಡು ಹೋಗಿದೆ. ಶಿವರಾಜ್ ಕುಮಾರ್ ಕೂಡ ನಂದಿನಿ ಉತ್ಪನ್ನಗಳ ರಾಯಭಾರಿಯಾಗಿ ತಂದೆ ಮತ್ತು ಸಹೋದರನ ಕೆಲಸವನ್ನು ಮುಂದುರೆಸಿಕೊಂಡು ಹೋಗಲಿದ್ದಾರೆ. 1996ರಿಂದ ಡಾ.ರಾಜ್ ಕುಮಾರ್ ರಾಯಭಾರಿಯಾಗಿದ್ದರೆ, 2009ರಲ್ಲಿ ಪುನೀತ್ ನೇಮಕವಾಗಿದ್ದರು. 2023ರಿಂದ ಆ ಜವಾಬ್ದಾರಿಯನ್ನು ಶಿವಣ್ಣ ವಹಿಸಿಕೊಂಡಿದ್ದಾರೆ.

Advertisement

By namma.sullia

ಅಂಗೈಯಲ್ಲಿ ನಮ್ಮ ಸುಳ್ಯ

Leave a Reply

Your email address will not be published. Required fields are marked *

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ