Categories: ಕ್ರೈಂ

ರಾಷ್ಟ್ರಪಕ್ಷಿ ನವಿಲು ಮಾಂಸ ಭಕ್ಷಣೆಗೆ ಮುಂದಾಗಿದ್ದ ಮೂವರ ಬಂಧನ

Advertisement
Advertisement
Advertisement

ತುಮಕೂರು: ರಾಜ್ಯದಲ್ಲಿ ಹುಲಿ ಉಗುರಿನ ಪೆಂಡೆಂಟ್ (Tiger Claw Pendent) ಪ್ರಕರಣ ಸದ್ದು ಮಾಡುತ್ತಿರುವ ಬೆನ್ನಲ್ಲೇ, ರಾಷ್ಟ್ರಪಕ್ಷಿ ನವಿಲು (Peacock) ಮಾಂಸ ಭಕ್ಷಣೆಗೆ ಮುಂದಾಗಿದ್ದ ಮೂವರನ್ನು ಬಂಧಿಸಿದ ಘಟನೆ ತುಮಕೂರಿನ (Tumakuru) ಮಾರನಾಯಕನಪಾಳ್ಯದಲ್ಲಿ (Maranayakanapalya) ನಡೆದಿದೆ. ಒಡಿಶಾ (Odisha) ಮೂಲದ ಬಿಟ್ಟಿಂಗ್ ನಾಯಕ್, ಬೈಷಾಕ್ ದಾವು, ದುಬಾ ಕಾಪತ್ ಬಂಧಿತ ಆರೋಪಿಗಳು. ಬಂಧಿತರು ಮಾರನಾಯಕನಪಾಳ್ಯದ ಇಟ್ಟಿಗೆ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದರು. ಕಳೆದ ಹಲವು ದಿನಗಳಿಂದ ಆರೋಪಿಗಳು ನವಿಲುಗಳನ್ನ ಕೊಂದು ಭಕ್ಷಿಸುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಅರಣ್ಯಾಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಳಿಯ ವೇಳೆ 1.5 ಕೆ.ಜಿ ನವಿಲಿನ ಹಸಿ ಮಾಂಸ, ನವಿಲಿನ ಎರಡು ಕಾಲುಗಳು, ಬೇಯಿಸಿದ ಮಾಂಸ, ನವಿಲು ಹಿಡಿಯಲು ಬಳಸಿದ್ದ ಬಲೆಗಳು, ಉರುಳುಗಳು ಮತ್ತು ಮಾಂಸ ಬೇಯಿಸಿದ್ದ ಪಾತ್ರೆಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ವಶಕ್ಕೆ ಪಡೆದ ಮಾಂಸವನ್ನು ಅಧಿಕಾರಿಗಳು ಎಫ್‌ಎಸ್‌ಎಲ್‌ಗೆ (FSL) ಕಳುಹಿಸಿದ್ದಾರೆ. ಬಂಧಿತರ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

Advertisement
namma.sullia

ಅಂಗೈಯಲ್ಲಿ ನಮ್ಮ ಸುಳ್ಯ

Recent Posts

Advertisement

ಜಟ್ಟಿಪಳ್ಳ: ಮನೆಯಿಂದ ಕಳವು ಪ್ರಕರಣ; ಕಳ್ಳನ ಹೆಡೆಮುರಿ ಕಟ್ಟಿದ ಪೋಲಿಸರು,

ಕಾಸರಗೋಡು ಮೂಲದ ಹಾಶಿಂ ಸೆರೆ ಕಳೆದ ಒಂದು‌ ತಿಂಗಳ ಹಿಂದೆ ಸುಳ್ಯ ಜಟ್ಟಿಪಳ್ಳದಲ್ಲಿ ನಿವೃತ್ತ ಬ್ಯಾಂಕ್ ಅಧಿಕಾರಿ ಮೋಹನದಾಸ ಮುದ್ಯರವರ…

1 day ago

ತಿಂಗಳ ಹಿಂದೆ ನಾಪತ್ತೆಯಾಗಿದ್ದ ಭಾರತೀಯ ವಿದ್ಯಾರ್ಥಿ ಲಂಡನ್‌ ನದಿಯಲ್ಲಿ ಶವವಾಗಿ ಪತ್ತೆ

ಲಂಡನ್: ಕಳೆದ ತಿಂಗಳು ಯುಕೆಯಲ್ಲಿ ನಾಪತ್ತೆಯಾಗಿದ್ದ 23 ವರ್ಷದ ಭಾರತೀಯ ವಿದ್ಯಾರ್ಥಿ ಲಂಡನ್‌ನ (London) ಥೇಮ್ಸ್ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.…

2 days ago

ಅರಂಬೂರು: ಹೊಳೆಯಲ್ಲಿ ಮುಳುಗಿದ ವ್ಯಕ್ತಿ; ಶವ ಮೇಲೆತ್ತಿದ ಪೈಚಾರ್ ಮುಳುಗು ತಜ್ಞರ ತಂಡ

ಸುಳ್ಯ: ಡಿ೧, ಮಡಿಕೇರಿಯ ಎರಡನೇ ಮಣ್ಣಗೇರಿಯ ನಿವಾಸಿ ವೆಂಕಟರಮಣ ಎಂಬುವವರು ಅರಂಬೂರು ಹೊಳೆಯಲ್ಲಿ ಮುಳುಗಿ‌ ಮೃತಪಟ್ಟ ಘಟನೆ ನಡೆದಿದ್ದು, ಮೃತ…

2 days ago

ಗಂಟಲಲ್ಲಿ ಚಕ್ಕುಲಿ ಸಿಲುಕಿಕೊಂಡು ಪುಟ್ಟ ಕಂದಮ್ಮ ದುರ್ಮರಣ

ತಿರುವನಂತಪುರಂ: ಚಕ್ಕುಲಿ (Murukku) ಗಂಟಲಲ್ಲಿ ಸಿಲುಕಿಕೊಂಡು ಒಂದೂವರೆ ವರ್ಷದ ಪುಟ್ಟ ಕಂದಮ್ಮ ಕೊನೆಯುಸಿರೆಳೆದ ಹೃದಯವಿದ್ರಾವಕ ಘಟನೆ ಕೇರಳದಲ್ಲಿ (Kerala) ನಡೆದಿದೆ. ಮೃತ…

2 days ago

ಮಲಯಾಳಂನ ಖ್ಯಾತ ಹಿರಿಯ ನಟಿ ಆರ್‌. ಸುಬ್ಬಲಕ್ಷ್ಮಿ ನಿಧನ

ತಿರುವನಂತಪುರ: ಮಲಯಾಳಂನ ಖ್ಯಾತ ನಟಿ ಆರ್‌. ಸುಬ್ಬಲಕ್ಷ್ಮಿ (87) ಅವರು ನಿಧನರಾಗಿದ್ದಾರೆ. ಗುರುವಾರ ರಾತ್ರಿ ತಿರುವನಂತಪುರದ ಖಾಸಗಿ ಆಸ್ಪತ್ರೆಯಲ್ಲಿ ಇಹಲೋಕ ತ್ಯಜಿಸಿದ್ದಾರೆ…

2 days ago

ಭಾರತ-ಆಸೀಸ್‌‌ ಪಂದ್ಯಕ್ಕೆ ಎದುರಾಯ್ತು ಹೊಸ ಸಂಕಷ್ಟ! ಇದು ಮಳೆಯಲ್ಲ ಕರೆಂಟ್‌‌ ಸಮಸ್ಯೆ

ಬರೋಬ್ಬರಿ ₹3.16 ಕೋಟಿ ಬಿಲ್ ಬಾಕಿ ಇಂದು ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 4ನೇ ಟಿ20 ಪಂದ್ಯ ರಾಯ್‌ಪುರದ ಶಹೀದ್…

2 days ago
Advertisement
Advertisement