ಪೈಚಾರ್: ಇಲ್ಲಿನ ಶಾಂತಿನಗರ ತಿರುವಿನಲ್ಲಿ ಸರಣಿ ಅಪಘಾತ ಸಂಭವಿಸಿದೆ. ಐಶರ್ ಟಿಪ್ಪರ್ ಹಾಗೂ ಸ್ವಿಫ್ಟ್ ಕಾರು ಡಿಕ್ಕಿಯಾಗಿದ್ದು, ಆ ಕಾರಿಗೆ ಹಿಂದೆಯಿಂದ ಬೈಕ್ ಒಂದು ಡಿಕ್ಕಿಯಾದ ಘಟನೆ ನಡೆದಿದೆ. ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ ಎಂದು ತಿಳಿದು ಬಂದಿದ್ದು, ಅಪಘಾತಕ್ಕೆ ಮುಖ್ಯ ಕಾರಣ ಅಸಮರ್ಪಕ ಹಾಗೂ ಕಿರಿದಾದ ರಸ್ತೆಯೆಂದು ಸಾರ್ವಜನಿಕರು ಮಾತನಾಡಿಕೊಳ್ಳುತ್ತಿದ್ದಾರೆ‌. ಆದಷ್ಟು ಬೇಗ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ. 

Leave a Reply

Your email address will not be published. Required fields are marked *