ರಾಜ್ಯದಲ್ಲಿ ಕಳೆದ ಹಲವು ತಿಂಗಳಿನಿಂದ ಹೃದಯಾಘಾತದಿಂದ ಸರಣಿ ಸಾವುಗಳು ಸಂಭವಿಸುತ್ತಿದ್ದು ಹಾಸನ ಜಿಲ್ಲೆಯ ಒಂದರಲ್ಲಿ ಇದುವರೆಗೂ ನಲವತ್ತಕ್ಕೂ ಹೆಚ್ಚು ಜನರು ಹೃದಯಘಾತಕ್ಕೆ ಬಲಿಯಾಗಿದ್ದಾರೆ ಅದರಲ್ಲೂ ಯುವಜನತೆ ಹೆಚ್ಚು ಬಳಿಯಾಗಿದ್ದು ಇದೀಗ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ಪಾಠ ಕೇಳುತ್ತಲೇ ಕುಸಿದು ಬಿದ್ದು 4ನೇ ತರಗತಿ ವಿದ್ಯಾರ್ಥಿ ಒಬ್ಬ ಸಾವನ್ನಪ್ಪಿದ್ದಾನೆ. ಹೌದು ಪಾಠ ಕೇಳುವಾಗಲೇ ಹೃದಯಾಘಾತದಿಂದ ವಿದ್ಯಾರ್ಥಿ ಸಾವನಪ್ಪಿದ್ದಾನೆ.

ಕುರುಬಗೆರ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಒಂದು ಘಟನೆ ನಡೆದಿದ್ದು, ಚಾಮರಾಜನಗರ ಗುಂಡ್ಲುಪೇಟೆ ತಾಲೂಕಿನ ಕುರುಬಗ್ಗೇರಿ ಎಂಬಲ್ಲಿ ನಾಲ್ಕನೇ ತರಗತಿ ವಿದ್ಯಾರ್ಥಿ 10 ವರ್ಷದ ಮನೋಜ್ ಕುಮಾರ್ ಸಾವನಪ್ಪಿದ್ದಾನೆ. ಪಾಠ ಕೇಳುತ್ತಿದ್ದಾಗ ಕುಸಿದು ಬಿದ್ದು ಮನೋಜ್ ಸಾವನಪ್ಪಿದ್ದಾನೆ. ಈತ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಹೃದಯದಲ್ಲಿ ರಂದ್ರ ಇತ್ತು ಎಂಬ ಮಾಹಿತಿ ತಿಳಿದು ಬಂದಿದೆ.

Leave a Reply

Your email address will not be published. Required fields are marked *