ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವರುಣನ ಆರ್ಭಟ ಹೆಚ್ಚಾಗಿದ್ದು, ಈಗಾಗಲೇ ರೆಡ್ ಅಲೆರ್ಟ್ ಘೋಷಿಸಿದೆ. ದ.ಕ ಜಿಲ್ಲೆಯ ಸುಳ್ಯ ತಾಲೂಕಿನಲ್ಲೂ ಮಳೆಯ ರೌದ್ರನರ್ತನ ಹೆಚ್ಚಾಗಿದ್ದು ಅಂಗಡಿ ಮುಂಗಟ್ಟುಗಳಿಗೆ ನೀರು ನುಗ್ಗಿದೆ. 

ಹಳೆಗೇಟು ವಿದ್ಯಾನಗರ ಬಳಿ ಬೆಟ್ಟಂಪಾಡಿ ತಿರುವಿನ ಮುಖ್ಯ ರಸ್ತೆಯಲ್ಲಿ ನೀರು ತುಂಬಿಕೊಂಡಿದ್ದು, ಭಾಗಷಃ ರಸ್ತೆ ನದಿಯಂತಾಗಿದೆ. ಅದೇ ರೀತಿ ರಾಜ್ಯ ಹೆದ್ದಾರಿಯಲ್ಲಿ ಕೂಡಾ ನೀರು ನಿಂತುಕೊಂಡಿದ್ದೆ, ನೀರು ಹೋಗಲು ಸರಿಯಾದ ವ್ಯವಸ್ಥೆ ಕೂಡಾ ಇಲ್ಲದ್ದು, ಇದಕ್ಕೆ ಬಹುಮುಖ್ಯ ಕಾರಣ‌ವೆಂದು ಸಾರ್ವಜನಿಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *