ಚಲಿಸುತ್ತಿದ್ದಾಗಲೇ ಕೆಎಸ್‌ಆರ್‌ಟಿಸಿ ಬಸ್ಸಿನ ಟಯರ್ ಕಳಚಿದ್ದು, ಸಂಭವನೀಯ ಅನಾಹುತ ತಪ್ಪಿದ ಘಟನೆ ಕುಂದಾಪುರ ಆಜ್ರಿ ಸಮೀಪದ ಹೆಮ್ಮಕ್ಕಿ ಬಳಿ ಶನಿವಾರ ನಡೆದಿದೆ. ಆಜ್ರಿಯಿಂದ ಕುಂದಾಪುರಕ್ಕೆ ಸಂಚರಿಸುವ ಕೆಎಸ್‌ಆರ್‌ಟಿಸಿ ಬಸ್ ಇದಾಗಿದೆ. ಬಸ್ ನಿಧಾನಗತಿಯಲ್ಲಿ ಸಂಚರಿಸುತ್ತಿದ್ದರಿAದ ಯಾವುದೇ ಅನಾಹುತ ಸಂಭವಿಸದೆ ಪ್ರಯಾಣಿಕರೆಲ್ಲರೂ ಅಪಾಯದಿಂದ ಪಾರಾಗಿದ್ದಾರೆ.ಈ ಬಗ್ಗೆ ಆಜ್ರಿಯ ನಿವಾಸಿ ಚಂದ್ರಹಾಸ ಅವರು ಪ್ರತಿಕ್ರಿಯೆ ನೀಡಿದ್ದು, ಕೆಎಸ್‌ಆರ್‌ಟಿಸಿ ಹಾಗೂ ಡಿಪೋ ಮೆಕ್ಯಾನಿಕ್‌ಗಳ ನಿರ್ಲಕ್ಷö್ಯದಿಂದ ಈ ಘಟನೆ ಸಂಭವಿಸಿದೆ. ಪ್ರಯಾಣಿಕರ ಜೀವದೊಂದಿಗೆ ಚೆಲ್ಲಾಟ ಆಡುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *