ಕೆಎಸ್‌ಆರ್‌ಟಿಸಿ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಸುಳ್ಯ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಇಂದು ಬೆಳಗ್ಗೆ ನಡೆದಿದೆ. ಸುಳ್ಯದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಿಂದ ಕೊಯನಾಡಿಗೆ ಹೋಗಬೇಕಿದ್ದ ಬಸ್ ನಲ್ಲಿ ಮೊದಲಿಗೆ ದಟ್ಟ ಹೊಗೆ ಕಾಣಿಸಿಕೊಂಡಿದ್ದು, ಬಳಿಕ ಬೆಂಕಿ ಕಾಣಿಸಿಕೊಂಡಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಸಂಶಯ ವ್ಯಕ್ತಪಡಿಸಲಾಗಿದೆ.

ಬಸ್‌ನಲ್ಲಿ ಬೆಂಕಿ ಕಾಣಿಸಿಹೊಂಡ ತಕ್ಷಣವೇ ಬಸ್ ನಲ್ಲಿದ್ದ ಪ್ರಯಾಣಿಕರನ್ನು ಕೆಳಕ್ಕೆ ಇಳಿಸಲಾಯಿತು. ಕೂಡಲೇ ಸ್ಥಳಕ್ಕೆ ಆಗಮಿಸಿದ ಸುಳ್ಯದ ಅಗ್ನಿಶಾಮಕ ದಳದವರು ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿ, ಸಂಭವನೀಯ ಅಪಾಯ ತಪ್ಪಿಸಿದ್ದಾರೆ.

Leave a Reply

Your email address will not be published. Required fields are marked *