ಬೆಳ್ಳಾರೆ: ಸವಣೂರು ಆಗಸ್ಟ್ 09 ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಸುಳ್ಯ ವಿಧಾನಸಭಾ ಕ್ಷೇತ್ರದ ಬೆಳ್ಳಾರೆ ಬ್ಲಾಕ್ ಪ್ರತಿನಿಧಿ ಸಭೆಯು ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿಯ ಅಧ್ಯಕ್ಷರಾದ ಅಬ್ದುಲ್ ರಝಾಕ್ ಕೆನರ ರವರ ಅಧ್ಯಕ್ಷತೆಯಲ್ಲಿ ಸವಣೂರಿನ ಅಂಬೇಡ್ಕರ್ ಭವನದಲ್ಲಿ ನಡೆಯಿತು.

ಬೆಳ್ಳಾರೆ ಬ್ಲಾಕ್ ನ 2024-27 ನೇಯ ಸಾಲಿಗೆ ಪದಾಧಿಕಾರಿಗಳನ್ನು ಚುನಾವಣೆಯ ಮೂಲಕ ಆಯ್ಕೆ ಮಾಡಲಾಯಿತು.ನೂತನ ಸಮಿತಿಯ
ಅಧ್ಯಕ್ಷರಾಗಿ ರಫೀಕ್ ಎಂ ಎ ಕಾರ್ಯದರ್ಶಿಯಾಗಿ ಹಮೀದ್ ಮರಕ್ಕಡ, ಕೋಶಾಧಿಕಾರಿಯಾಗಿ, ಇರ್ಷಾದ್ ಸರ್ವೆ, ಉಪಾಧ್ಯಕ್ಷರಾಗಿ ಅಬ್ದುಲ್ ರಹಿಮಾನ್ ತಂಬಿನಮಕ್ಕಿ, ಜೊತೆ ಕಾರ್ಯದರ್ಶಿಯಾಗಿ ಅಝೀಝ್ ಅಯ್ಯನಕಟ್ಟೆ,ಸಮಿತಿ ಸದಸ್ಯರಾಗಿ ಮೊಯ್ದೀನ್ ಬೆಳ್ಳಾರೆ ಹಾಗೂ ಯೂಸಫ್ ಹಾಜಿ ಬೇರಿಕೆ ಯವರು ಆಯ್ಕೆಯಾದರು. ಚುನಾವಣೆ ಪ್ರಕ್ರಿಯೆಯ ಆರ್. ಓ ಆಗಿ,ಎಸ್‌ಡಿಪಿಐ ದ.ಕ ಜಿಲ್ಲಾ ಸಮಿತಿ ಸದಸ್ಯರಾದ ಅಶ್ರಫ್ ತಲಪಾಡಿ  ಸಹಾಯಕರಾಗಿ, ಮಿಸ್ಬಾಹ್ ಅಡ್ಕಾರ್, ಕಾರ್ಯನಿರ್ವಹಿಸಿದರು. ಈ ಸಂದರ್ಭದಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿಯ ಪ್ರಧಾನ ಕಾರ್ಯದರ್ಶಿಗಳಾದ
ಶರೀಫ್ ನಿಂತಿಕಲ್,ಪಕ್ಷ ಸಂಘಟನಾ ಕಾರ್ಯದರ್ಶಿ ಸಿದ್ದೀಕ್ ಸವಣೂರು. ಉಪಸ್ಥಿತರಿದ್ದರು. ಸಿದ್ದೀಕ್ ಸವಣೂರು ರವರ ಸ್ವಾಗತ ಭಾಷಣದೊಂದಿಗೆ ಆರಂಭವಾದ ಸಭೆಯು ಶರೀಫ್ ನಿಂತಿಕಲ್ ರವರ ಧನ್ಯವಾದ ಅರ್ಪಣೆಯೊಂದಿಗೆ
ಮುಕ್ತಾಯವಾಯಿತು.

Leave a Reply

Your email address will not be published. Required fields are marked *