Advertisement

ವಿಟ್ಲ: ಮಹಿಳೆಯೊಬ್ಬರನ್ನು ಮಾನಭಂಗಕ್ಕೆ ಯತ್ನಿಸಿದ ಆರೋಪದಡಿಯಲ್ಲಿ, ಪೋಲಿಸರು ಒಬ್ಬನನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಯನ್ನು ಕೇರಳ ಮೂಲದ ಸಂತೂ ಯಾನೆ ಸಂತೋಷ್ ಎಂದು ಗುರುತಿಸಲಾಗಿದೆ.

ಕನ್ಯಾನ ಗ್ರಾಮದ ವಿವಾಹಿತ ಮಹಿಳೆಯ ಮಾನಭಂಗಕ್ಕೆ ಈ ಆರೋಪಿ ಯತ್ನಿಸಿದ್ದಾನೆ. ಕೆಂಪು ಕಲ್ಲು ಲಾರಿಯಲ್ಲಿ ಲೋಡರ್ ಕೆಲಸ ಮಾಡುತ್ತಿದ್ದ ಈ ಆರೋಪಿ ಸಂತೋಷ್, ಬೈಕಿನಲ್ಲಿ ಹೋಗುತ್ತಿದ್ದ ಮಹಿಳೆಯನ್ನು ತಡೆದು ನಿಲ್ಲಿಸಿ ಮಾನಭಂಗಕ್ಕೆ ಯತ್ನಿಸಿದ್ದಾನೆ ಎನ್ನಲಾಗಿದೆ. ಈ ವೇಳೆ ಮಹಿಳೆಯ ಸಂಬಂಧಿಕರು ಈ ಕೃತ್ಯವನ್ನು ನೋಡಿದ್ದಾರೆ ಎನ್ನಲಾಗಿದೆ.

ಇನ್ನು ಈ ವೇಳೆ ಆತ ಬೈಕ್ ಬಿಟ್ಟು ಪರಾರಿಯಾಗಿದ್ದ ಎಂದು ವಿಟ್ಲ ಪೊಲೀಸ್ ಠಾಣೆ ಗೆ ದೂರು ನೀಡಿದ್ದು. ‌ದೂರಿನ ಅನ್ವಯ ಕಾರ್ಯಚರಣೆ ನಡೆಸಿದ ವಿಟ್ಲ ಪೋಲೀಸ್ ಇನ್ಸ್ ಪೆಕ್ಟರ್ ನಾಗರಾಜ್ ಎಚ್.ಅವರ ನೇತೃತ್ವದ ಎಸ್.ಐ.ಸಂದೀಪ್ ಅವರ ತಂಡ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

Advertisement

By namma.sullia

ಅಂಗೈಯಲ್ಲಿ ನಮ್ಮ ಸುಳ್ಯ

Leave a Reply

Your email address will not be published. Required fields are marked *

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ