Advertisement

ನವದೆಹಲಿ: ಅರುಣಾಚಲ ಪ್ರದೇಶದ ಅಪ್ಪರ್ ಸಿಯಾಂಗ್ ಜಿಲ್ಲೆಯಲ್ಲಿ ಸಂಭವಿಸಿದ ಹೆಲಿಕಾಪ್ಟರ್ ದುರಂತದಲ್ಲಿ ಕಾಸರಗೋಡಿನ ವೀರ ಯೋಧ ಕೂಡ ಅಸುನೀಗಿದ್ದಾರೆ.

ಕಾಸರಗೋಡು ಜಿಲ್ಲೆಯ ಚೆರ್ವತ್ತೂರು ನಿವಾಸಿಯಾದ ಅಶ್ವಿನ್ ಈ ದುರಂತದಲ್ಲಿ ಪ್ರಾಣ ಕಳೆದುಕೊಂಡ ಭಾರತಾಂಬೆಯ ಪುತ್ರ .

ಓಣಂ ಹಬ್ಬದ ವೇಳೆ ಊರಿಗೆ ಬಂದಿದ್ದ ಅಶ್ವಿನ್ ಕಳೆದ ನಾಲ್ಕು ವರ್ಷಗಳಿಂದ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು.

ಪಾರ್ಥಿವ ಶರೀರವನ್ನು  ಬೆಂಗಳೂರು ವಿಮಾನ  ನಿಲ್ದಾಣದ ಮೂಲಕ ಕೇರಳದ ಕಣ್ಣೂರು  ವಿಮಾನ ನಿಲ್ದಾಣಕ್ಕೆ, ಅಲ್ಲಿಂದ ಸ್ವಗೃಹಕ್ಕೆ ತರಲು  ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

Advertisement

By namma.sullia

ಅಂಗೈಯಲ್ಲಿ ನಮ್ಮ ಸುಳ್ಯ

Leave a Reply

Your email address will not be published. Required fields are marked *

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ