ಸುಳ್ಯ: ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲಾ ಪ್ರವಾಸ ಕೈಗೊಂಡಿರುವ ಕರ್ನಾಟಕ ರಾಜ್ಯ ಕೃಷಿ ಸಚಿವರಾದ ಎನ್. ನರೇಂದ್ರಸ್ವಾಮಿ ಅವರು ಮಂಗಳೂರಿನಿಂದ ಮಡಿಕೇರಿಗೆ ತೆರಳುವ ಮಾರ್ಗಮಧ್ಯೆ ತೆಕ್ಕಿಲ್ ಬಳಿ ಆಗಮಿಸಿದಾಗ, ಅವರನ್ನು ಆತ್ಮೀಯವಾಗಿ ಸ್ವಾಗತಿಸಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ (ಸಚಿವ ದರ್ಜೆ) ಟಿ.ಎಂ. ಶಾಹಿದ್ ತೆಕ್ಕಿಲ್ ಅವರು ಸಚಿವರಿಗೆ ಶಾಲು ಹೊದಿಸಿ ಗೌರವಿಸಿದರು. ಕಾರ್ಯಕ್ರಮದಲ್ಲಿ ಕೆಡಿಬಿ ಸದಸ್ಯರಾದ ಅಶ್ರಫ್ ಗುಂಡಿ ಹಾಗೂ ಪ್ರಮುಖರು ಉಪಸ್ಥಿತರಿದ್ದರು.
