ಬೊಳುಬೈಲು: ಬೊಳುಬೈಲಿನಲ್ಲಿ ಸಂಭವಿಸಿದ ಅಪಘಾತದಲ್ಲಿ ತಲೆಗೆ ಗಂಭೀರ ಗಾಯಗೊಂಡಿದ್ದ ಸುಳ್ಯದ ತರಕಾರಿ ಉದ್ಯಮಿ ರಾಮಕೃಷ್ಣ ಆಲಂಕಲ್ಯರು (65) ಅವರು ಸೆಪ್ಟೆಂಬರ್ 19ರ ಮುಂಜಾನೆ ಸುಳ್ಯದ ಕೆ.ವಿ.ಜಿ. ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಸೆಪ್ಟೆಂಬರ್ 17ರಂದು ಸಂಜೆ ಸುಳ್ಯದಿಂದ ಮಂಡೆಕೋಲಿನಲ್ಲಿರುವ ತಮ್ಮ ಕೃಷಿ ತೋಟಕ್ಕೆ ಸ್ಕೂಟಿಯಲ್ಲಿ ತೆರಳುತ್ತಿದ್ದ ವೇಳೆ ನಡೆದ ಅಪಘಾತದಲ್ಲಿ ತೀವ್ರ ಸ್ವರೂಪದ ಗಾಯಗೊಂಡ ಅವರನ್ನು ಸುಳ್ಯ ಆಸ್ಪತ್ರೆಗೆ, ಬಳಿಕ ವೈದ್ಯರ ಸಲಹೆಯಂತೆ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ತಲೆಗೆ ಗಾಯಗೊಂಡಿದ್ದರಿಂದ ಅಂದೇ ರಾತ್ರಿ ಮತ್ತೆ ಸುಳ್ಯದ ಕೆ.ವಿ.ಜಿ. ಆಸ್ಪತ್ರೆಗೆ ಕರೆತರಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ಅವರು ಕೊನೆಯುಸಿರೆಳೆದಿದ್ದಾರೆ. ಮೃತರು ಪತ್ನಿ ಹಾಗೂ ಉದ್ಯೋಗದಲ್ಲಿರುವ ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ. ಇಂದು ಮಧ್ಯಾಹ್ನ 12 ಗಂಟೆಯಿಂದ ಸುಳ್ಯದ ಜೂನಿಯರ್ ಕಾಲೇಜು ಬಳಿಯ ಮನೆಯಲ್ಲಿ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
