ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ (Mahesh Shetty Timarodi) ಅವರನ್ನು ರಾಯಚೂರು (Raichur) ಜಿಲ್ಲೆಯ ಮಾನ್ವಿ ತಾಲೂಕಿಗೆ 1 ವರ್ಷದವರೆಗೆ ಗಡಿಪಾರು (Exiled) ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿಗೆ ತಿಮರೋಡಿಯನ್ನ ಗಡಿಪಾರು ಮಾಡಿ ಈ ಕುರಿತು ಪುತ್ತೂರು AC ಸ್ಟೆಲ್ಲಾ ವರ್ಗೀಸ್ ಅವರು ಆದೇಶ (Order) ಹೊರಡಿಸಿದ್ದಾರೆ. ತಿಮರೋಡಿ ವಿರುದ್ಧ 32 ಕೇಸ್ ಇರೋ ಹಿನ್ನೆಲೆಯಲ್ಲಿ 1 ವರ್ಷದ ಅವಧಿಗೆ ಮಾನ್ವಿಗೆ ಗಡಿಪಾರು ಮಾಡಲಾಗಿದೆ.

