ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮಂಗಳೂರು ,
ತಾಲೂಕು ಕಾನೂನು ಸೇವೆಗಳ ಸಮಿತಿ ಪುತ್ತೂರು ಹಾಗೂ ವಕೀಲರ ಸಂಘ (ರಿ.) ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ ರೋಟರಿ ಕ್ಲಬ್ ಪುತ್ತೂರು ಸಿಟಿ ಹಾಗೂ ಶಿಕ್ಷಣ ಸಂಪನ್ಮೂಲ ಕೇಂದ್ರಗಳ ಒಕ್ಕೂಟ ಮಂಗಳೂರು ಹಾಗೂ ಶಿಕ್ಷಣ ಸಂಪನ್ಮೂಲ ಕೇಂದ್ರ ಪುತ್ತೂರು ಇವರುಗಳ ಸಹಯೋಗದೊಂದಿಗೆ ‘ಹಿರಿಯ ನಾಗರಿಕರ ದಿನಾಚರಣೆ’ ಯ ಅಂಗವಾಗಿ ಕಾನೂನು ಮಾಹಿತಿ
ಕಾರ್ಯಕ್ರಮ ಮನೀಷಾ ಸಭಾಂಗಣ, ಪುತ್ತೂರು, ಇಲ್ಲಿ ನಡೆಯಿತು. ಈ ಕಾರ್ಯಕ್ರಮವನ್ನು ಹಿರಿಯ ವಕೀಲರಾದ ಶ್ರೀ ಪಿ ಕೆ ಸತೀಶನ್ ಉದ್ಘಾಟಿಸಿ ಕಾರ್ಯಕ್ರಮಕ್ಕೆ ಶುಭ ಕೋರಿದರು. ಸಂಪನ್ಮೂಲ ವ್ಯಕ್ತಿಯಾಗಿ ಶ್ರೀಮತಿ ಚಂದ್ರಾವತಿ ಟಿ ಪ್ಯಾನಲ್ ವಕೀಲರು ಮತ್ತು ಶ್ರೀ ಮೊಹಮ್ಮದ್ ರಫೀಕ್ ದರ್ಬೆ, ಅಧ್ಯಕ್ಷರು, ಶಿಕ್ಷಣ ಸಂಪನ್ಮೂಲ ಕೇಂದ್ರ, ಪುತ್ತೂರು ಇವರು ನಿರ್ವಹಿಸಿ ಮಾತನಾಡಿದರು. ರೋಟರಿ ಕ್ಲಬ್ ಪುತ್ತೂರು ಸಿಟಿ. ಅಧ್ಯಕ್ಷರಾದ ಶ್ರೀ ಪಿ. ಉಲ್ಲಾಸ್ ಪೈ ಸ್ವಾಗತಿಸಿ, ಶಿಕ್ಷಣ ಸಂಪನ್ಮೂಲ ಕೇಂದ್ರದ ಸದಸ್ಯರಾದ ರಾಜೇಶ್ವರಿ ವಕೀಲರು ವಂದಿಸಿದರು.
ಶಿಕ್ಷಣ ಸಂಪನ್ಮೂಲ ಕೇಂದ್ರದ ವತ್ಸಲ ನಾಯಕ್ ಸಹಕರಿಸಿದರು.
ಶ್ರೀಮತಿ ನಯನಾ ರೈ, ಕಾರ್ಯದರ್ಶಿ, ಶಿಕ್ಷಣ ಸಂಪನ್ಮೂಲ ಕೇಂದ್ರಗಳ ಒಕ್ಕೂಟ, ಮಂಗಳೂರು
ಹಾಗೂ ಪ್ಯಾರಾ ಲೀಗಲ್ ವಾಲಂಟಿಯರ್, ತಾ.ಕಾ.ಸೇ. ಸಮಿತಿ ಪುತ್ತೂರು ಕಾರ್ಯಕ್ರಮ ನಿರೂಪಿಸಿ ಸಂಯೋಜಿಸಿದರು.

Leave a Reply

Your email address will not be published. Required fields are marked *