ಸುಳ್ಯ: ಇಂಪಾಕ್ಟ್ ಆರ್ಟ್ & ಸ್ಪೋರ್ಟ್ಸ್ ಕರಾಟೆ ಅಕಾಡೆಮಿ ಹಾಗೂ ದಕ್ಷಿಣ ಕನ್ನಡ ಆರ್ಟ್ಸ್ & ಸ್ಪೋರ್ಟ್ಸ್ ಕರಾಟೆ ಅಸೋಸಿಯೇಶನ್ ಸಹಯೋಗದಲ್ಲಿ ಸುಳ್ಯದ ಅಮರಜ್ಯೋತಿ ಕೆ ವಿ ಜಿ ಸಭಾಂಗಣದಲ್ಲಿ ನಡೆದ ರಾಷ್ಟ್ರ ಮಟ್ಟದ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಸುಳ್ಯ ಶಾಂತಿನಗರ ನಿವಾಸಿ ಪ್ರವೀಣ್ ಹಾಗೂ ಕವಿತಾ ದಂಪತಿಗಳ ಪುತ್ರ ಮನನ್.ಪಿ ಗೌಡ ಅವಳಿ ಪ್ರಶಸ್ತಿ ಪಡೆದುಕೊಂಡಿದ್ದಾನೆ. ಕರಾಟೆಯ ಕಟಾ ಹಾಗೂ ಕುಮಿಟಿ ವಿಭಾಗದಲ್ಲಿ, ಎರಡು ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾನೆ. ಮನನ್ ಗೌಡ ಸಂತ ಬ್ರಿಜಿಡ್ಸ್ ಶಾಲೆಯಲ್ಲಿ 5 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು,  ಧನುಷ್ ಹಾಗೂ ಉದಯ ರವರ ತರಬೇತಿಯಲ್ಲಿ ಬೆಳೆದಿದ್ದಾನೆ.

Leave a Reply

Your email address will not be published. Required fields are marked *