ಸಮಾಜ ಕಲ್ಯಾಣ ಇಲಾಖೆ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್. ಸಿ ಮಹದೇವಪ್ಪ ಅವರಿಂದ ಪ್ರಶಂಸೆ


ಮೈಸೂರಿನ ಯೂನಿವರ್ಸಿಟಿ ಆವರಣದಲ್ಲಿ ನಡೆದ ದಸರಾ ಯುವ ಸಂಭ್ರಮ ದಲ್ಲಿ ಪುತ್ತೂರಿನ ಬಾಲ ಕಲಾವಿದೆ ಕು. ಸೋನಿಕ ಜನಾರ್ಧನ್ ಅವರು ಡಾ. ಹಂಸಲೇಖ ಅವರು ಸಂಗೀತ ಸಂಯೋಜನೆ ಮಾಡಿರುವ ಡಾ. ಬಿ.ಆರ್ ಅಂಬೇಡ್ಕರ್ ರಚಿತ ಭಾರತೀಯ ಸಂವಿಧಾನದ ಪೀಠಿಕೆಯನ್ನು ಸುಶ್ರಾವ್ಯವಾಗಿ ಪ್ರಸ್ತುತ ಪಡಿಸಿ ನೆರೆದ ಯುವ ಸಮೂಹ ಹಾಗೂ ಗಣ್ಯರ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಹಲವಾರು ಕಡೆಗಳಲ್ಲಿ ಕಾರ್ಯಕ್ರಮಗಳನ್ನು ನೀಡಿರುವ ಇವರು ದ. ಕ  ಜಿಲ್ಲೆಯಿಂದ ಪ್ರಥಮ ಬಾರಿಗೆ ಮೈಸೂರು ದಸರಾ ಯುವ ಸಂಭ್ರಮ ಕಾರ್ಯಕ್ರಮ ನೀಡಿದ ಹೆಗ್ಗಳಿಕೆಗೂ  ಪಾತ್ರವಾಗಿದ್ದಾರೆ. ರಾಜ್ಯ ಸಮಾಜ ಕಲ್ಯಾಣ ಸಚಿವರಾದ ಡಾ.ಹೆಚ್. ಸಿ ಮಹದೇವಪ್ಪ ರವರು  ಸೇರಿದಂತೆ ವಿವಿಧ ಗಣ್ಯರು ಬಾಲ ಪ್ರತಿಭೆಯನ್ನು ಪ್ರಶಂಸಿಸಿದ್ದಾರೆ. ಮೈಸೂರಿನ ಐಡಿಯಲ್ ಜಾವಾ ರೋಟರಿ ಶಾಲೆಯಲ್ಲಿ ಒಂದನೇ ತರಗತಿಯಲ್ಲಿ ಕಲಿಯುತ್ತಿರುವ ಈಕೆ, ಮೈಸೂರಿನ ಐದನೇ JMFC ನ್ಯಾಯಾಲಯದ  ಸಹಾಯಕ ಸರಕಾರಿ ಅಭಿಯೋಜಕ ಜನಾರ್ಧನ್ ಪುತ್ತೂರು ಮತ್ತು ಪ್ರಮೀಳಾ ಜನಾರ್ಧನ್ ದಂಪತಿಗಳ ಪುತ್ರಿ ಯಾಗಿದ್ದಾರೆ. ಮೈಸೂರಿನ ಯುವ ವಕೀಲರುಗಳಾದ ಕು. ಹೇಮಾ. ಹೆಚ್ ಮತ್ತು ಕಾತ್ಯಯಿನಿ ಅವರು ಕಾರ್ಯಕ್ರಮವನ್ನು ನಿರೂಪಣೆ ಮಾಡಿದರು.

Leave a Reply

Your email address will not be published. Required fields are marked *