ಧರ್ಮಸ್ಥಳ: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಪ್ರಕರಣ ಸಂಬಂಧ ಎಸ್ಐಟಿ ತನಿಖೆ ತೀವ್ರಗೊಂಡಿದೆ. ನೇತ್ರಾವತಿ ಸ್ನಾನಘಟ್ಟ ಸಮೀಪದ ಕಾಡಿನಲ್ಲಿ ದೂರುದಾರ ಹಲವು ಶವ ಹೂತಿಟ್ಟ ಸ್ಥಳಗಳನ್ನು ಗುರುತಿಸಿದ್ದಾನೆ. ಈ ಪೈಕಿ ಮೊದಲ ಸ್ಥಳವನ್ನು ನಿನ್ನೆ (ಜು.29)ರಂದು ಅಗೆಯಲಾಗಿತ್ತು. ಆದರೆ ಯಾವುದೇ ಕಳೇಬರ ಪತ್ತೆಯಾಗಿರಲಿಲ್ಲ. ಇಂದು (ಜು.30) ದೂರುದಾರ ಗುರುತಿಸಿದ 2ನೇ ಸ್ಥಳ ಅಗೆಯಲಾಗಿದೆ. ಆದರೆ ಎರಡನೇ ಸ್ಥಳದಲ್ಲೂ ಯಾವುದೇ ಕಳೇಬರ ಪತ್ತೆಯಾಗಿಲ್ಲ.

ನೇತ್ರಾವತಿ ಸ್ನಾನಘಟ್ಟದ ಪಕ್ಕದಲ್ಲೇ ಇರುವ ಕಾಡಿನ ಪ್ರವೇಶದ ಬಳಿ 2ನೇ ಸ್ಥಳ ಗುರುತಿಸಲಾಗಿತ್ತು. ಇಂದು ಕಾರ್ಮಿಕರು 6 ಅಡಿ ಆಳದವರೆಗೆ ಸಮಾಧಿ ಸ್ಥಳ ಅಗೆದಿದ್ದಾರೆ. ಆದರೆ ಯಾವುದೇ ಕಳೇಬರಹ ಪತ್ತೆಯಾಗಿಲ್ಲ. ಹೀಗಾಗಿ 2ನೇ ಸಮಾಧಿ ಸ್ಥಳದ ಉತ್ಖನನ ಕಾರ್ಯ ಅಂತ್ಯಗೊಳಿಸಲಾಗಿದೆ. ಧರ್ಮಸ್ಥಳ ಗ್ರಾಮ ಪಂಚಾಯತಿಯ 20 ಕಾರ್ಮಿಕರ ತಂಡವನ್ನು ಸಮಾಧಿ ಸ್ಥಳ ಅಗೆಯಲು ಬಳಸಿಕೊಳ್ಳಲಾಗಿದೆ. ಆರು ಅಡಿ ಉದ್ದ, ಐದು ಅಡಿ ಅಗಲದಲ್ಲಿ ಸಮಾಧಿ ಸ್ಥಳವನ್ನು 6 ಅಡಿ ಆಳವದ ವರೆಗೆ ಅಗೆಯಲಾಗಿದೆ. ಆದರೆ ಯಾವುದೇ ಅಸ್ಥಿಪಂಜರ ಪತ್ತೆಯಾಗಿಲ್ಲ. ಮಧ್ಯಾಹ್ನದ ವಿರಾಮ ನಂತರ ಮತ್ತೆ ತನಿಖೆ ಆರಂಬಿಸಿದ್ದಾರೆ ಅಧಿಕಾರಿಗಳು

Leave a Reply

Your email address will not be published. Required fields are marked *