ಕೇರಳ ವಿಧಾನಸಭಾ ಚುನಾವಣೆ 2026 ರ ಮತ ಎಣಿಕೆ ಕಾರ್ಯ ಮುಕ್ತಾಯ ಹಂತಕ್ಕೆ ಬಂದಿದ್ದು, ಕೊಲ್ಲಂ ಜಿಲ್ಲೆಯ ಚಾತನ್ನೂರ್ ವಿಧಾನಸಭಾ ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಬಿಜೆಪಿಯ ಬಿ.ಬಿ. ಗೋಪಕುಮಾರ್ ಅವರು ಭರ್ಜರಿ ವಿಜಯ ಸಾಧಿಸಿದ್ದಾರೆ.

​ಬಿ.ಬಿ. ಗೋಪಕುಮಾರ್ ಅವರು ಒಟ್ಟು 51,923 ಮತಗಳನ್ನು ಪಡೆದು ಗೆಲುವಿನ ನಗೆ ಬೀರಿದ್ದಾರೆ. ಇವರು ತಮ್ಮ ಸಮೀಪದ ಪ್ರತಿಸ್ಪರ್ಧಿಗಳಾದ ಎಲ್‌ಡಿಎಫ್ (ಸಿಪಿಐ) ಅಭ್ಯರ್ಥಿ ಅಡ್ವಕೇಟ್ ಆರ್. ರಾಜೇಂದ್ರನ್ ಹಾಗೂ ಯುಡಿಎಫ್ (ಕಾಂಗ್ರೆಸ್) ಅಭ್ಯರ್ಥಿ ಸೂರಜ್ ರವಿ ಅವರನ್ನು ಮಣಿಸುವ ಮೂಲಕ ಈ ಮಹತ್ವದ ಗೆಲುವು ತಮ್ಮದಾಗಿಸಿಕೊಂಡಿದ್ದಾರೆ.

​ಚುನಾವಣಾ ಪೂರ್ವ ಸಮೀಕ್ಷೆಗಳು ಈ ಕ್ಷೇತ್ರದಲ್ಲಿ ಬಿಜೆಪಿಗೆ ಗೆಲುವು ಕಷ್ಟ ಎಂದು ಅಂದಾಜಿಸಿದ್ದವು. ಆದರೆ, ಈ ಎಲ್ಲ ಲೆಕ್ಕಾಚಾರಗಳನ್ನು ತಲೆಕೆಳಗಾಗಿಸಿರುವ ಬಿಜೆಪಿ, ಚಾತನ್ನೂರ್ ಕ್ಷೇತ್ರದಲ್ಲಿ ಕಮಲ ಅರಳಿಸುವ ಮೂಲಕ ಕೇರಳದಲ್ಲಿ ಭಾರೀ ಮುನ್ನಡೆ ಸಾಧಿಸಿದೆ. ಕಳೆದ ಎರಡು ಚುನಾವಣೆಗಳಲ್ಲಿ ಈ ಕ್ಷೇತ್ರದಿಂದ ಸಿಪಿಐ ಅಭ್ಯರ್ಥಿ ಜಯಗಳಿಸಿದ್ದರು. ಆದರೆ ಈ ಬಾರಿ ಬಿ.ಬಿ. ಗೋಪಕುಮಾರ್ ಅವರ ಈ ಅಭೂತಪೂರ್ವ ಜಯವು ಎನ್‌ಡಿಎ ಪಾಳೆಯದಲ್ಲಿ ಹೊಸ ಸಂಚಲನ ಮೂಡಿಸಿದೆ.

Leave a Reply

Your email address will not be published. Required fields are marked *