ಸುಳ್ಯ : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಬದಲಾವಣೆಗಾಗಿ ಕೊಡುಗೆ ಎಂಬ ಘೋಷ ವಾಕ್ಯದೊಂದಿಗೆ ನಾಯಕರ ಸಭೆಯು ಸವಣೂರಿನ ಮಾಂತೂರು ಅಂಬೇಡ್ಕರ್ ಭವನದಲ್ಲಿ ನಡೆಯಿತು.

ಕ್ಷೇತ್ರ ಸಮಿತಿ ಅಧ್ಯಕ್ಷರಾದ ಮಿರಾಝ್ ಸುಳ್ಯ ರವರು ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.
SDPI ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರು ರವರು ಮಾತನಾಡಿ ಪಕ್ಷವನ್ನು ಬೂತ್ ಮಟ್ಟದಲ್ಲಿ ಬಲವರ್ಧನೆ ಮಾಡುವ ಬಗ್ಗೆ ಹಾಗೂ ಜನರ ಮೂಲಭೂತ ಸಮಸ್ಯೆಗಳಿಗೆ ಪ್ರಮುಖವಾಗಿ ಆದ್ಯತೆ ನೀಡಿ, ಸ್ಪಂದಿಸಿ ಇನ್ನಷ್ಟು ಹತ್ತಿರವಾಗಬೇಕೆಂದು ಕರೆ ನೀಡಿದರು.

ಎಸ್‌ಡಿಪಿಐ ರಾಜ್ಯ ಕಾರ್ಯದರ್ಶಿ ರಿಯಾಝ್ ಕಡಂಬು ಮಾತನಾಡಿ ಅಧಿಕಾರದಲ್ಲಿರುವ ಪಕ್ಷಗಳು ಕಾರ್ಪೋರೇಟ್ ಕುಳಗಳನ್ನು ಮೆಚ್ಚಿಸುತ್ತಿವೆಯೇ ಹೊರತು ಜನರ ಪರವಾಗಿಲ್ಲ, ಇಲ್ಲಿರುವ ಮುಸ್ಲಿಮರನ್ನು ಹಾಗೂ ಹಿಂದುಳಿದ ವರ್ಗದವರ ವಿರುದ್ಧ ಬಿಜೆಪಿ ಕೋಮುವಾದದ ಹೆಸರಿನಲ್ಲಿ ದಾಳಿ ಮಾಡುತ್ತಿದೆ ಹಾಗೂ ತಾರತಮ್ಯ ಮಾಡುತ್ತಿದೆ ಮತ್ತು ಈ ಕಡೆ ಕಾಂಗ್ರೆಸ್ ಜಾತ್ಯಾತೀತತೆಯ ಹೆಸರಿನಲ್ಲಿ ಫ್ಯಾಸಿಸ್ಟ್ ಸಿದ್ದಾಂತದೊಂದಿಗೆ ರಾಜ್ಯದ ಜನತೆಗೆ ದ್ರೋಹವನ್ನೇ ಬಗೆಯುತ್ತಿದೆ ಎಂದು ಹೇಳಿದರು.

ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿ ಕಾರ್ಯದರ್ಶಿ ಎಂ.ಎಸ್.ರಫೀಕ್ ಸ್ವಾಗತಿಸಿ,ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿ ಜೊತೆ ಕಾರ್ಯದರ್ಶಿ ಷರೀಫ್ ಕಾರ್ಯಕ್ರಮ ನಿರೂಪಿಸಿ,ಸಮಿತಿ ಸದಸ್ಯರಾದ ನ್ಯಾಯವಾದಿ ರಶೀದ್ ಸುಳ್ಯ ವಂದಿಸಿದರು. ಈ ಕಾರ್ಯಕ್ರಮದಲ್ಲಿ ಸಮಿತಿಯ ಕೋಶಾಧಿಕಾರಿ ಅಬ್ದುಲ್ ರಹ್ಮಾನ್ ಬೆಳ್ಳಾರೆ, ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *