ಸುಳ್ಯ,ಸೆ. 16: ಭಾರತೀಯ ಗಡಿಭದ್ರತಾ ಪಡೆಗೆ ಆಯ್ಕೆಯಾದ ಅರಂತೋಡು ಗ್ರಾಮದ ಬೆದ್ರುಪಣೆ ನಿವಾಸಿ ಕು.ಸುಶ್ಮಿತಾ ಬೆದ್ರುಪಣೆ ಮನೆಗೆ ಶಾಸಕರು ಭೇಟಿಯಾಗಿ ಅಭಿನಂದನೆ ಸಲ್ಲಿಸಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಕೇಶವ ಅಡ್ತಲೆ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಹರೀಶ ಕಂಜಿಪಿಲಿ, ಅರಂತೋಡು ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸಂತೋಷ ಕುತ್ತಮೊಟ್ಟೆ, ಮಾಜಿ ಜಿಲ್ಲಾಪಂಚಾಯತ್ ಸದಸ್ಯ ಸತೀಶ ನಾಯ್ಕ, ಅರಂತೋಡು , ಮಾಜಿ ತಾಲ್ಲೂಕು ಪಂಚಾಯತ್ ಉಪಾಧ್ಯಕ್ಷೆ ಪುಷ್ಪ ಮೇದಪ್ಪ ಉಳುವಾರು , ಸುಳ್ಯ ಮಂಡಲ ಸಮಿತಿ ಕೋಶಾಧಿಕಾರಿ ಸುಬೋಧ್ ಶೆಟ್ಟಿ ಮೆನಾಲ, ಭಾರತಿ ಉಳುವಾರು, ಗುತ್ತಿಗೆದಾರ ನವೀನ್ ಚಂದ್ರ ಗುತ್ತು,ಜಿಲ್ಲಾ ಸಾಮಾಜಿಕ ಜಾಲತಾಣ ಪ್ರಕೋಷ್ಠದ ಸದಸ್ಯ ಪ್ರಸಾದ ಕಾಟೂರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *