ಮಡಿಕೇರಿ-ಮಂಗಳೂರು ಹೆದ್ದಾರಿಯ ದೇವರಕೊಲ್ಲಿ ಬಳಿ ತಮಿಳುನಾಡಿನಿಂದ ಮಂಗಳೂರಿಗೆ ತೆರಳುತ್ತಿದ್ದ ಪಿಕಪ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾದ ಘಟನೆ ನಡೆದಿದೆ.

ಅಪಘಾತದ ರಭಸಕ್ಕೆ ವಾಹನವು ತೀವ್ರವಾಗಿ ಜಖಂಗೊಂಡಿದ್ದು, ಪಿಕಪ್ನಲ್ಲಿದ್ದ ಸಹಚಾಲಕನ ಕೈ ತುಂಡಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಸಹಚಾಲಕನನ್ನು ಸ್ಥಳೀಯರ ನೆರವಿನಿಂದ ತಕ್ಷಣವೇ ಸುಳ್ಯದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇದೀಗ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ.
ವರದಿ: ತಾಜುದ್ದೀನ್ ಟರ್ಲಿ





