ಸುಳ್ಳ: ಕಳೆದ ಕೆಲವು ದಿನಗಳಿಂದ ತೀವ್ರ ಬಿಸಿಲಿನ ತಾಪದಿಂದ ಕಂಗೆಟ್ಟಿದ್ದ ಜನತೆಗೆ ಇಂದು ಸುರಿದ ಮಳೆ ಕೊಂಚ ತಂಪು ನೀಡಿದಂತಿದೆ, ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಾದ್ಯಂತ ಇಂದು (ಪೆಬ್ರವರಿ 21, 2026) ಸಂಜೆ ವೇಳೆಗೆ ಹವಾಮಾನದಲ್ಲಿ ಭಾರಿ ಬದಲಾವಣೆಯಾಗಿದ್ದು, ಕಲ್ಲುಗುಂಡಿ, ಅರಂಬೂರು, ಪೈಚಾರ್, ಸೇರಿದಂತೆ ಹಲವು ಕಡೆಗಳಲ್ಲಿ ತುಂತುರು ಮಳೆಯಾಗಿದೆ.

ಸಾರ್ವಜನಿಕರಿಗೆ ಸೂಚನೆ:
ಮಳೆ ಬರುತ್ತಿರುವುದರಿಂದ ರಸ್ತೆಗಳು ಜಾರುವ ಸಾಧ್ಯತೆ ಇರುತ್ತದೆ, ಆದ್ದರಿಂದ ವಾಹನ ಸವಾರರು ಜಾಗರೂಕರಾಗಿರಿ. ಹೊರಗಡೆ ಒಣಗಲು ಹಾಕಿರುವ ಕೃಷಿ ಉತ್ಪನ್ನಗಳನ್ನು ಸುರಕ್ಷಿತವಾಗಿರಿಸಿಕೊಳ್ಳಲು ಸೂಚಿಸಲಾಗಿದೆ.




