ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಉದ್ಯಮಿ ರಾಮಕೃಷ್ಣ ಆಲಂಕಲ್ಯ ನಿಧನ

ಬೊಳುಬೈಲು: ಬೊಳುಬೈಲಿನಲ್ಲಿ ಸಂಭವಿಸಿದ ಅಪಘಾತದಲ್ಲಿ ತಲೆಗೆ ಗಂಭೀರ ಗಾಯಗೊಂಡಿದ್ದ ಸುಳ್ಯದ ತರಕಾರಿ ಉದ್ಯಮಿ ರಾಮಕೃಷ್ಣ ಆಲಂಕಲ್ಯರು (65) ಅವರು ಸೆಪ್ಟೆಂಬರ್ 19ರ ಮುಂಜಾನೆ ಸುಳ್ಯದ ಕೆ.ವಿ.ಜಿ. ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.ಸೆಪ್ಟೆಂಬರ್ 17ರಂದು ಸಂಜೆ ಸುಳ್ಯದಿಂದ ಮಂಡೆಕೋಲಿನಲ್ಲಿರುವ ತಮ್ಮ ಕೃಷಿ ತೋಟಕ್ಕೆ ಸ್ಕೂಟಿಯಲ್ಲಿ ತೆರಳುತ್ತಿದ್ದ ವೇಳೆ ನಡೆದ ಅಪಘಾತದಲ್ಲಿ ತೀವ್ರ ಸ್ವರೂಪದ ಗಾಯಗೊಂಡ ಅವರನ್ನು ಸುಳ್ಯ ಆಸ್ಪತ್ರೆಗೆ, ಬಳಿಕ ವೈದ್ಯರ ಸಲಹೆಯಂತೆ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ತಲೆಗೆ ಗಾಯಗೊಂಡಿದ್ದರಿಂದ ಅಂದೇ ರಾತ್ರಿ ಮತ್ತೆ ಸುಳ್ಯದ ಕೆ.ವಿ.ಜಿ. ಆಸ್ಪತ್ರೆಗೆ ಕರೆತರಲಾಗಿದ್ದು, ಚಿಕಿತ್ಸೆ […]

Read More

ಆಟವಾಡುತ್ತಿದ್ದಾಗ ಧ್ವಜಸ್ತಂಭದ ಹಗ್ಗ ಕುತ್ತಿಗೆಗೆ ಬಿಗಿದು 11 ವರ್ಷದ ಬಾಲಕ ಸಾ*ವು

ಕಾಸರಗೋಡು: ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಧ್ವಜಸ್ತಂಭದ ಹಗ್ಗ ಕುತ್ತಿಗೆಗೆ ಬಿಗಿದು 11 ವರ್ಷದ ಬಾಲಕನೋರ್ವ ದಾರುಣವಾಗಿ ಮೃತಪಟ್ಟ ಘಟನೆ ಕಾಸರಗೋಡು ಜಿಲ್ಲೆಯ ಮಡಿಕೈ ಪಂಚಾಯತ್ ವ್ಯಾಪ್ತಿಯಲ್ಲಿ ಗುರುವಾರ ಸಾಯಂಕಾಲ ಸಂಭವಿಸಿದೆ. ಮಡಿಕೈ ಮೂನ್ನುರೋಡ್‌ನ ರಾಜೇಶ್ ಮತ್ತು ನೀತು ದಂಪತಿಯ ಏಕೈಕ ಪುತ್ರ ಅನೇಕ್ (11) ಮೃತಪಟ್ಟ ಬಾಲಕ. ಈತ ಕಾಂಞಿರಪೊಯಿಲ್ ಸರ್ಕಾರಿ ಪ್ರೌಢಶಾಲೆಯ 5ನೇ ತರಗತಿ ವಿದ್ಯಾರ್ಥಿಯಾಗಿದ್ದನು. ಘಟನೆಯ ವಿವರ: ಗುರುವಾರ ಸಂಜೆ ಶಾಲೆ ಮುಗಿಸಿ ಬಂದಿದ್ದ ಅನೇಕ್, ಮನೆ ಸಮೀಪದ ನಂದನ್‌ಕುಳಿ ಅಂಗನವಾಡಿ ಅಂಗಳಕ್ಕೆ ಆಟವಾಡಲು ತೆರಳಿದ್ದನು. […]

Read More