ಸುಳ್ಯ: ಜ್ವರದಿಂದ ಬಳಲುತ್ತಿದ್ದ ಜಯನಗರದ ಯುವಕ ಲೋಕೇಶ್ ನಿಧನ

ಸುಳ್ಯ, : ಜಯನಗರದ ನಿವಾಸಿ ಲೋಕೇಶ್ (36ವ) ಅವರು ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 10 ರಂದು ಸುಳ್ಯದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.ಕಳೆದ ಎರಡು ದಿನಗಳ ಹಿಂದೆ ಲೋಕೇಶ್ ಅವರಿಗೆ ಜ್ವರ ಕಾಣಿಸಿಕೊಂಡಿತ್ತು. ತಕ್ಷಣ ಮನೆಯವರು ಅವರನ್ನು ಸುಳ್ಯದ ಖಾಸಗಿ ಜ್ಯೋತಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.ಮೃತರು ತಂದೆ ಬಾಬು ಕೊಡಕೇರಿ, ತಾಯಿ ರುಕ್ಮಿಣಿ, ಸಹೋದರರಾದ ಹರೀಶ್ ಮತ್ತು ಕರುಣೇಶ್ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.

Read More

ಆಟವಾಡುತ್ತಿದ್ದಾಗ ಧ್ವಜಸ್ತಂಭದ ಹಗ್ಗ ಕುತ್ತಿಗೆಗೆ ಬಿಗಿದು 11 ವರ್ಷದ ಬಾಲಕ ಸಾ*ವು

ಕಾಸರಗೋಡು: ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಧ್ವಜಸ್ತಂಭದ ಹಗ್ಗ ಕುತ್ತಿಗೆಗೆ ಬಿಗಿದು 11 ವರ್ಷದ ಬಾಲಕನೋರ್ವ ದಾರುಣವಾಗಿ ಮೃತಪಟ್ಟ ಘಟನೆ ಕಾಸರಗೋಡು ಜಿಲ್ಲೆಯ ಮಡಿಕೈ ಪಂಚಾಯತ್ ವ್ಯಾಪ್ತಿಯಲ್ಲಿ ಗುರುವಾರ ಸಾಯಂಕಾಲ ಸಂಭವಿಸಿದೆ. ಮಡಿಕೈ ಮೂನ್ನುರೋಡ್‌ನ ರಾಜೇಶ್ ಮತ್ತು ನೀತು ದಂಪತಿಯ ಏಕೈಕ ಪುತ್ರ ಅನೇಕ್ (11) ಮೃತಪಟ್ಟ ಬಾಲಕ. ಈತ ಕಾಂಞಿರಪೊಯಿಲ್ ಸರ್ಕಾರಿ ಪ್ರೌಢಶಾಲೆಯ 5ನೇ ತರಗತಿ ವಿದ್ಯಾರ್ಥಿಯಾಗಿದ್ದನು. ಘಟನೆಯ ವಿವರ: ಗುರುವಾರ ಸಂಜೆ ಶಾಲೆ ಮುಗಿಸಿ ಬಂದಿದ್ದ ಅನೇಕ್, ಮನೆ ಸಮೀಪದ ನಂದನ್‌ಕುಳಿ ಅಂಗನವಾಡಿ ಅಂಗಳಕ್ಕೆ ಆಟವಾಡಲು ತೆರಳಿದ್ದನು. […]

Read More