ಮೈಸೂರಿನ ಅಂಗಡಿ ಕಸ ಸಂಪಾಜೆಯಲ್ಲಿ ಪತ್ತೆ: GST ರಶೀದಿ ಜಾಡು ಹಿಡಿದು ₹5000 ಫೈನ್ ಹಾಕಿದ ಗ್ರಾ.ಪಂ!

ಕಲ್ಲುಗುಂಡಿ/ಸಂಪಾಜೆ: ರಾಷ್ಟ್ರೀಯ ಹೆದ್ದಾರಿ 275ರ ಸಂಪಾಜೆ ಗ್ರಾಮದ ಕಡೆಪಾಲ ಬಳಿ ರಾತ್ರೋರಾತ್ರಿ ತ್ಯಾಜ್ಯ ಸುರಿದು ಪರಾರಿಯಾಗಿದ್ದ ವ್ಯಕ್ತಿಯನ್ನು ಸಂಪಾಜೆ ಗ್ರಾಮ ಪಂಚಾಯಿತಿ ಅಧಿಕಾರಿಗಳು ಒಂದೇ ದಿನದಲ್ಲಿ ಪತ್ತೆ ಹಚ್ಚಿ, ₹5,000 ದಂಡ ವಿಧಿಸುವ ಮೂಲಕ ಕಠಿಣ ಸಂದೇಶ ರವಾನಿಸಿದ್ದಾರೆ. ಮೈಸೂರಿನ ಬನ್ನಿಮಂಟಪದ ಅಂಗಡಿಯೊಂದರ ಕಸವನ್ನು ಕಿಡಿಗೇಡಿಗಳು ರಾತ್ರಿ ವೇಳೆಯಲ್ಲಿ ಕಡೆಪಾಲ ಸಮೀಪದ ಹೆದ್ದಾರಿ ಬದಿಯಲ್ಲಿ ಸುರಿದು ಹೋಗಿದ್ದರು. ಮುಂಜಾನೆ ಈ ವಿಷಯ ಗಮನಕ್ಕೆ ಬರುತ್ತಿದ್ದಂತೆಯೇ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಜಿ. ಕೆ. ಹಮೀದ್ ಗೂನಡ್ಕ ಅವರು […]

Read More